4:43 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ: ಸಿಎಲ್ ಪಿ  ಉಪ ನಾಯಕ ಖಾದರ್

30/01/2022, 23:47

ತೊಕ್ಕೊಟ್ಟು(reporterkarnataka.com): ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಖಾದರ್ ಹೇಳಿದರು.


ಅವರು ನಾಟೆಕಲ್ ಜಂಕ್ಷನ್ ನಿಂದ ಅಸೈಗೋಳಿ ಜಂಕ್ಷನ್ ವರೆಗೆ 10 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಕಾಮಗಾರಿಗೆ  ಕೇಂದ್ರ ಸರಕಾರದ ಅನುದಾನ ಬಿಡುಗಡೆಯಾಗಿದ್ದರೆ ಟೋಲ್ ಗೇಟನ್ನು ಪ್ರಾರಂಭಿಸಲಿದ್ದರು. ಆದರೆ ಬಡ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬರಬಾರದೆಂಬ ಉದ್ದೇಶದಿಂದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಈ ರಸ್ತೆ ನಡೆಸಲಾಗುವುದು ಎಂದರು.


ರಾಜ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್, ಸಹಾಯಕ ಕಾರ್ಯಪಾಲ ಇಂಜಿನಿಯರ್ ಕೆ.ಟಿ.ಚಂದ್ರ ಶೇಕರಯ್ಯ ಮತ್ತು ಕನ್ಸಲ್ಟೆಂಟ್ ಕೌಶಿಕ್ ಅವರೊಂದಿಗೆ ಖಾದರ್ ಕಾಮಗಾರಿಯ ಬಗ್ಗೆ ಮಾತುಕತೆ ನಡೆಸಿದರು.

ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂಚಲಾಕ್ಷಿ, ಬೆಳ್ಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಸತ್ತಾರ್, ಮಂಜನಾಡಿ ಪಂಚಾಯತ್ ಉಪಾಧ್ಯಕ್ಷ ವಿನ್ಸೆಂಟ್ ವೇಗಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪದ್ಮಾವತಿ ಕಾಂಗ್ರೆಸ್ ಪ್ರಮುಖರಾದ ಎನ್.ಎಸ್. ಕರೀಂ, ರವಿರಾಜ್ ಶೆಟ್ಟಿ ದೇರಳೆಕಟ್ಟೆ, ಟಿ.ಎಸ್ ಅಬ್ದುಲ್ಲಾ, ಅಬ್ದುರ್ರಹ್ಮಾನ್ ಕೋಡಿಜಾಲ್, ನಾಸೀರ್ ಸಾಮಾನಿಗೆ, ಇಸ್ಮಾಯಿಲ್ ನಾಟೆಕಲ್, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ನಝರ್ ಷಾ ಪಟ್ಟೋರಿ, ಅಚ್ಚುತ ಗಟ್ಟಿ, ದೇವಣ್ಣ ಶೆಟ್ಟಿ, ಇಕ್ಬಾಲ್, ರುಕಿಯ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು