1:21 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ: ಸಿಎಲ್ ಪಿ  ಉಪ ನಾಯಕ ಖಾದರ್

30/01/2022, 23:47

ತೊಕ್ಕೊಟ್ಟು(reporterkarnataka.com): ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಖಾದರ್ ಹೇಳಿದರು.


ಅವರು ನಾಟೆಕಲ್ ಜಂಕ್ಷನ್ ನಿಂದ ಅಸೈಗೋಳಿ ಜಂಕ್ಷನ್ ವರೆಗೆ 10 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಕಾಮಗಾರಿಗೆ  ಕೇಂದ್ರ ಸರಕಾರದ ಅನುದಾನ ಬಿಡುಗಡೆಯಾಗಿದ್ದರೆ ಟೋಲ್ ಗೇಟನ್ನು ಪ್ರಾರಂಭಿಸಲಿದ್ದರು. ಆದರೆ ಬಡ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬರಬಾರದೆಂಬ ಉದ್ದೇಶದಿಂದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಈ ರಸ್ತೆ ನಡೆಸಲಾಗುವುದು ಎಂದರು.


ರಾಜ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್, ಸಹಾಯಕ ಕಾರ್ಯಪಾಲ ಇಂಜಿನಿಯರ್ ಕೆ.ಟಿ.ಚಂದ್ರ ಶೇಕರಯ್ಯ ಮತ್ತು ಕನ್ಸಲ್ಟೆಂಟ್ ಕೌಶಿಕ್ ಅವರೊಂದಿಗೆ ಖಾದರ್ ಕಾಮಗಾರಿಯ ಬಗ್ಗೆ ಮಾತುಕತೆ ನಡೆಸಿದರು.

ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂಚಲಾಕ್ಷಿ, ಬೆಳ್ಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಸತ್ತಾರ್, ಮಂಜನಾಡಿ ಪಂಚಾಯತ್ ಉಪಾಧ್ಯಕ್ಷ ವಿನ್ಸೆಂಟ್ ವೇಗಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪದ್ಮಾವತಿ ಕಾಂಗ್ರೆಸ್ ಪ್ರಮುಖರಾದ ಎನ್.ಎಸ್. ಕರೀಂ, ರವಿರಾಜ್ ಶೆಟ್ಟಿ ದೇರಳೆಕಟ್ಟೆ, ಟಿ.ಎಸ್ ಅಬ್ದುಲ್ಲಾ, ಅಬ್ದುರ್ರಹ್ಮಾನ್ ಕೋಡಿಜಾಲ್, ನಾಸೀರ್ ಸಾಮಾನಿಗೆ, ಇಸ್ಮಾಯಿಲ್ ನಾಟೆಕಲ್, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ನಝರ್ ಷಾ ಪಟ್ಟೋರಿ, ಅಚ್ಚುತ ಗಟ್ಟಿ, ದೇವಣ್ಣ ಶೆಟ್ಟಿ, ಇಕ್ಬಾಲ್, ರುಕಿಯ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು