8:49 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ: ಸಿಎಲ್ ಪಿ  ಉಪ ನಾಯಕ ಖಾದರ್

30/01/2022, 23:47

ತೊಕ್ಕೊಟ್ಟು(reporterkarnataka.com): ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಖಾದರ್ ಹೇಳಿದರು.


ಅವರು ನಾಟೆಕಲ್ ಜಂಕ್ಷನ್ ನಿಂದ ಅಸೈಗೋಳಿ ಜಂಕ್ಷನ್ ವರೆಗೆ 10 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಕಾಮಗಾರಿಗೆ  ಕೇಂದ್ರ ಸರಕಾರದ ಅನುದಾನ ಬಿಡುಗಡೆಯಾಗಿದ್ದರೆ ಟೋಲ್ ಗೇಟನ್ನು ಪ್ರಾರಂಭಿಸಲಿದ್ದರು. ಆದರೆ ಬಡ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬರಬಾರದೆಂಬ ಉದ್ದೇಶದಿಂದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಈ ರಸ್ತೆ ನಡೆಸಲಾಗುವುದು ಎಂದರು.


ರಾಜ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್, ಸಹಾಯಕ ಕಾರ್ಯಪಾಲ ಇಂಜಿನಿಯರ್ ಕೆ.ಟಿ.ಚಂದ್ರ ಶೇಕರಯ್ಯ ಮತ್ತು ಕನ್ಸಲ್ಟೆಂಟ್ ಕೌಶಿಕ್ ಅವರೊಂದಿಗೆ ಖಾದರ್ ಕಾಮಗಾರಿಯ ಬಗ್ಗೆ ಮಾತುಕತೆ ನಡೆಸಿದರು.

ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂಚಲಾಕ್ಷಿ, ಬೆಳ್ಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಸತ್ತಾರ್, ಮಂಜನಾಡಿ ಪಂಚಾಯತ್ ಉಪಾಧ್ಯಕ್ಷ ವಿನ್ಸೆಂಟ್ ವೇಗಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪದ್ಮಾವತಿ ಕಾಂಗ್ರೆಸ್ ಪ್ರಮುಖರಾದ ಎನ್.ಎಸ್. ಕರೀಂ, ರವಿರಾಜ್ ಶೆಟ್ಟಿ ದೇರಳೆಕಟ್ಟೆ, ಟಿ.ಎಸ್ ಅಬ್ದುಲ್ಲಾ, ಅಬ್ದುರ್ರಹ್ಮಾನ್ ಕೋಡಿಜಾಲ್, ನಾಸೀರ್ ಸಾಮಾನಿಗೆ, ಇಸ್ಮಾಯಿಲ್ ನಾಟೆಕಲ್, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ನಝರ್ ಷಾ ಪಟ್ಟೋರಿ, ಅಚ್ಚುತ ಗಟ್ಟಿ, ದೇವಣ್ಣ ಶೆಟ್ಟಿ, ಇಕ್ಬಾಲ್, ರುಕಿಯ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು