12:08 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಜನಸಂಘ ಸ್ಥಾಪಕ ಪಂಡಿತ್‌ ದೀನ ದಯಾಳ್‌ ಉಪಾಧ್ಯಾಯ ಅವರ105 ನೇ ಜನ್ಮದಿನಾಚರಣೆ 

26/09/2021, 21:48

ಮಂಗಳೂರು(reporterkarnataka.com): ಏಕಾತ್ಮ ಮಾನವ ದರ್ಶನ ಮತ್ತು ಅಂತ್ಯೋದಯದ ಪರಿಕಲ್ಪನೆಯನ್ನು ತೋರಿಸಿಕೊಟ್ಟ,ಜನಸಂಘದ ಸ್ಥಾಪಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ105 ನೇ ಜನ್ಮದಿನಾಚರಣೆ ಕಾರ್ಯಕ್ರಮ ಇಂದು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ  ದಿ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಅದ್ಯಕ್ಷತೆ ಶಾಸಕ ಡಿ. ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.

ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಚಾರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಅವರು ಪಂಡಿತ್ ದೀನ್ ದಯಳ್ ಉಪಾಧ್ಯಾಯ ಅವರ ಚಿಂತನೆ, ವಿಚಾರ, ಅವರು ಪ್ರತಿಪಾದಿಸಿದ ಏಕಾತ್ಮಮಾನವತಾ ಸಿದ್ಧಾಂತ ಹಾಗೂ ಅಂತ್ಯೋದಯದ ಕಲ್ಪನೆ ಇವತ್ತಿಗೂ ಪ್ರಸ್ತುತ ಎಂದು ನುಡಿ ನಮನ ಸಲ್ಲಿಸಿದರು. 

ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್ ಅವರು ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜೀವನದ ಬಗ್ಗೆ ಬೌದ್ಧಿಕ್  ಮಂಡಿಸಿದರು. ಮಂಡಲ ಉಪಾಧ್ಯಕ್ಷ ಅಜಯ ಕುಲಶೇಕರ್ ಅವರು ಪ್ರಧಾನ ಮಂತ್ರಿ ಮೋದಿಯವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದರು. 

ಮಂಡಲ ಪ್ರಧಾನ ಕಾರ್ಯದರ್ಶಿ ರೂಪ.ಡಿ. ಬಂಗೇರ ಸ್ವಾಗತಿಸಿದರು. ಮಂಡಲ ಕಾರ್ಯದರ್ಶಿ  ಲಲ್ಲೇಶ್ ವಂದಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯರಾದ  ಮೋನಪ್ಪ ಭಂಡಾರಿ , ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ , ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಕಂಪನಿಯ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮೇಯರ್  ಪ್ರೇಮಾನಂದ ಶೆಟ್ಟಿ , ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರ್ ,ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ.ಜೆ ,ಮಂಡಲ ಉಪಾಧ್ಯಕ್ಷ ಕಿರಣ್ ರೈ,ರಮೇಶ್ ಹೆಗ್ಡೆ ,ರಮೇಶ್ ಕಂಡೆಟ್ಟು ,ಮೀರಾ ಕರ್ಕೇರ, ಮಂಡಲ ಕೋಶಾಧಿಕಾರಿ ಶ್ರೀನಿವಾಸ್ ಶೇಟ್ , ಮಂಡಲ ಕಾರ್ಯದರ್ಶಿಗಳಾದ ವಿನೋದ್ ಮೆಂಡನ್ ಹಾಗೂ ಸುರೇಖಾ ಹೆಗ್ಡೆ 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು