1:50 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಜ್ಞ‍ಾನಯೋಗಿ ಶ್ರೀದೂಪಂ ಅಂಜಿನಪ್ಪ ಗುರೂಜಿ ಲಿಂಗೈಕ್ಯ: ವಿವಿಧ ಮಠಾಧೀಶರ ಸಂತಾಪ

14/12/2021, 21:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಯರ್ರಗುಂಡ್ಲಹಟ್ಟಿ ಶ್ರೀಆರೂಢ ಪರಮಾನಾಂದ ಆಶ್ರಮದ ಜ್ಞ‍ಾನಯೋಗಿ ಪರಮಾನಂದ ಪೂಜ್ಯರಾದ ಶ್ರೀಧೂಪಂ ಅಂಜಿನಪ್ಪ ಮಹಾಸ್ವಾಮಿಗಳು(82)ಲಿಂಗೈಕ್ಯರಾಗಿದ್ದು,ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಅಂತ್ಯ ಕ್ರಿಯೆ: ಲಿಂಗೈಕ್ಯ ಶ್ರೀಗಳ ಅಂತ್ಯಕ್ರಿಯೆ ಡಿ14ರಂದು ಮಧ್ಯಾಹ್ನ ಮಠದ ಆವರಣದಲ್ಲಿ ನಡೆಯಿತು.

ಸಂತಾಪ:  ಪರಮ ಪೂಜ್ಯ ಶ್ರೀಗಳ ಅಗಲಿಕೆಗೆ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಸೇರಿದಂತೆ ವಿವಿಧ ಮಠಾಧೀಶ್ವರರು ಹಾಗೂ ಸ್ವಾಮೀಜಿಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಜನಪ್ರತಿನಿಧಿಗಳು, 

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ವಿವಿಧ ಅಧಿಕಾರಿಗಳ ವರ್ಗ, ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಪೂಜ್ಯರ ಶಿಷ್ಯಬಳಗ ಹಾಗೂ ‍ಅಪಾರ ಭಕ್ತ ಸ್ತೋಮದಿಂದ ಅವರ ಅಗಲಿಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು