11:14 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜನನ-ಮರಣ ಪ್ರಮಾಣ ಪತ್ರ ಶುಲ್ಕ 10 ಪಟ್ಟು ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ

06/02/2025, 20:20

ನವದೆಹಲಿ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರಕ್ಕೂ ಹತ್ತುಪಟ್ಟು ಶುಲ್ಕ ಹೆಚ್ಚಿಸಿ ಜನರನ್ನು ಲೂಟಿ ಮಾಡುವ ತನ್ನ ನಿಜ ಸ್ವರೂಪ ತೋರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರದ ಕ್ರಮದ ವಿರುದ್ಧ ತಮ್ಮ X ಖಾತೆಯಲ್ಲಿ ತೀವ್ರವಾಗಿ ಖಂಡಿಸಿರುವ ಸಚಿವರು, ಕಾಂಗ್ರೆಸ್ ಸರ್ಕಾರದ ಬೆಲೆ ಹೆಚ್ಚಳ ಪಟ್ಟಿಯಲ್ಲಿ ಇದೊಂದು ಬಾಕಿ ಇತ್ತೇನೋ? ಎಂದು ಹರಿ ಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನು 5 ರಿಂದ 50 ರೂಪಾಯಿಗೆ ಹೆಚ್ಚಿಸಿ ಶ್ರೀಸಾಮಾನ್ಯರು ಹುಟ್ಟು – ಸಾವಿಗೂ ದಂಡ ತೆರುವಂತೆ ಮಾಡಿದೆ ಎಂದು ಜೋಶಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ನೀರಿನ ಕರ, ನಂದಿನಿ ಹಾಲು, ಪಹಣಿ ಶುಲ್ಕ, ಪೆಟ್ರೋಲ್, ಡಿಸೇಲ್, ಅಬಕಾರಿ ಸುಂಕ, ವಿದ್ಯುತ್ ಬಿಲ್ ಹೀಗೆ ಜನಸಾಮಾನ್ಯರ ಅಗತ್ಯತೆಗಳ ಬೆಲೆ ಏರಿಸಿ ಬರೆ ಎಳೆದಿದೆ. ಈಗ ಜನನ-ಮರಣ ಪ್ರಮಾಣ ಪತ್ರದ ಶುಲ್ಕವೂ ಸಾಲದಾಯಿತೇ? ಎಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.10ರಷ್ಟು ತೆರಿಗೆ ಹಂಚಿಕೆ ಪಾಲು ಅಧಿಕಗೊಳಿಸಿ ಅನುದಾನ ಒದಗಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರದ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು