12:29 PM Thursday19 - June 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜನನ-ಮರಣ ಪ್ರಮಾಣ ಪತ್ರ ಶುಲ್ಕ 10 ಪಟ್ಟು ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ

06/02/2025, 20:20

ನವದೆಹಲಿ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರಕ್ಕೂ ಹತ್ತುಪಟ್ಟು ಶುಲ್ಕ ಹೆಚ್ಚಿಸಿ ಜನರನ್ನು ಲೂಟಿ ಮಾಡುವ ತನ್ನ ನಿಜ ಸ್ವರೂಪ ತೋರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರದ ಕ್ರಮದ ವಿರುದ್ಧ ತಮ್ಮ X ಖಾತೆಯಲ್ಲಿ ತೀವ್ರವಾಗಿ ಖಂಡಿಸಿರುವ ಸಚಿವರು, ಕಾಂಗ್ರೆಸ್ ಸರ್ಕಾರದ ಬೆಲೆ ಹೆಚ್ಚಳ ಪಟ್ಟಿಯಲ್ಲಿ ಇದೊಂದು ಬಾಕಿ ಇತ್ತೇನೋ? ಎಂದು ಹರಿ ಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನು 5 ರಿಂದ 50 ರೂಪಾಯಿಗೆ ಹೆಚ್ಚಿಸಿ ಶ್ರೀಸಾಮಾನ್ಯರು ಹುಟ್ಟು – ಸಾವಿಗೂ ದಂಡ ತೆರುವಂತೆ ಮಾಡಿದೆ ಎಂದು ಜೋಶಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ನೀರಿನ ಕರ, ನಂದಿನಿ ಹಾಲು, ಪಹಣಿ ಶುಲ್ಕ, ಪೆಟ್ರೋಲ್, ಡಿಸೇಲ್, ಅಬಕಾರಿ ಸುಂಕ, ವಿದ್ಯುತ್ ಬಿಲ್ ಹೀಗೆ ಜನಸಾಮಾನ್ಯರ ಅಗತ್ಯತೆಗಳ ಬೆಲೆ ಏರಿಸಿ ಬರೆ ಎಳೆದಿದೆ. ಈಗ ಜನನ-ಮರಣ ಪ್ರಮಾಣ ಪತ್ರದ ಶುಲ್ಕವೂ ಸಾಲದಾಯಿತೇ? ಎಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.10ರಷ್ಟು ತೆರಿಗೆ ಹಂಚಿಕೆ ಪಾಲು ಅಧಿಕಗೊಳಿಸಿ ಅನುದಾನ ಒದಗಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರದ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು