11:36 AM Sunday7 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜನನ-ಮರಣ ಪ್ರಮಾಣ ಪತ್ರ ಶುಲ್ಕ 10 ಪಟ್ಟು ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ

06/02/2025, 20:20

ನವದೆಹಲಿ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರಕ್ಕೂ ಹತ್ತುಪಟ್ಟು ಶುಲ್ಕ ಹೆಚ್ಚಿಸಿ ಜನರನ್ನು ಲೂಟಿ ಮಾಡುವ ತನ್ನ ನಿಜ ಸ್ವರೂಪ ತೋರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರದ ಕ್ರಮದ ವಿರುದ್ಧ ತಮ್ಮ X ಖಾತೆಯಲ್ಲಿ ತೀವ್ರವಾಗಿ ಖಂಡಿಸಿರುವ ಸಚಿವರು, ಕಾಂಗ್ರೆಸ್ ಸರ್ಕಾರದ ಬೆಲೆ ಹೆಚ್ಚಳ ಪಟ್ಟಿಯಲ್ಲಿ ಇದೊಂದು ಬಾಕಿ ಇತ್ತೇನೋ? ಎಂದು ಹರಿ ಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನು 5 ರಿಂದ 50 ರೂಪಾಯಿಗೆ ಹೆಚ್ಚಿಸಿ ಶ್ರೀಸಾಮಾನ್ಯರು ಹುಟ್ಟು – ಸಾವಿಗೂ ದಂಡ ತೆರುವಂತೆ ಮಾಡಿದೆ ಎಂದು ಜೋಶಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ನೀರಿನ ಕರ, ನಂದಿನಿ ಹಾಲು, ಪಹಣಿ ಶುಲ್ಕ, ಪೆಟ್ರೋಲ್, ಡಿಸೇಲ್, ಅಬಕಾರಿ ಸುಂಕ, ವಿದ್ಯುತ್ ಬಿಲ್ ಹೀಗೆ ಜನಸಾಮಾನ್ಯರ ಅಗತ್ಯತೆಗಳ ಬೆಲೆ ಏರಿಸಿ ಬರೆ ಎಳೆದಿದೆ. ಈಗ ಜನನ-ಮರಣ ಪ್ರಮಾಣ ಪತ್ರದ ಶುಲ್ಕವೂ ಸಾಲದಾಯಿತೇ? ಎಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.10ರಷ್ಟು ತೆರಿಗೆ ಹಂಚಿಕೆ ಪಾಲು ಅಧಿಕಗೊಳಿಸಿ ಅನುದಾನ ಒದಗಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರದ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು