6:09 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜನನ-ಮರಣ ಪ್ರಮಾಣ ಪತ್ರ ಶುಲ್ಕ 10 ಪಟ್ಟು ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ

06/02/2025, 20:20

ನವದೆಹಲಿ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರಕ್ಕೂ ಹತ್ತುಪಟ್ಟು ಶುಲ್ಕ ಹೆಚ್ಚಿಸಿ ಜನರನ್ನು ಲೂಟಿ ಮಾಡುವ ತನ್ನ ನಿಜ ಸ್ವರೂಪ ತೋರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರದ ಕ್ರಮದ ವಿರುದ್ಧ ತಮ್ಮ X ಖಾತೆಯಲ್ಲಿ ತೀವ್ರವಾಗಿ ಖಂಡಿಸಿರುವ ಸಚಿವರು, ಕಾಂಗ್ರೆಸ್ ಸರ್ಕಾರದ ಬೆಲೆ ಹೆಚ್ಚಳ ಪಟ್ಟಿಯಲ್ಲಿ ಇದೊಂದು ಬಾಕಿ ಇತ್ತೇನೋ? ಎಂದು ಹರಿ ಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನು 5 ರಿಂದ 50 ರೂಪಾಯಿಗೆ ಹೆಚ್ಚಿಸಿ ಶ್ರೀಸಾಮಾನ್ಯರು ಹುಟ್ಟು – ಸಾವಿಗೂ ದಂಡ ತೆರುವಂತೆ ಮಾಡಿದೆ ಎಂದು ಜೋಶಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ನೀರಿನ ಕರ, ನಂದಿನಿ ಹಾಲು, ಪಹಣಿ ಶುಲ್ಕ, ಪೆಟ್ರೋಲ್, ಡಿಸೇಲ್, ಅಬಕಾರಿ ಸುಂಕ, ವಿದ್ಯುತ್ ಬಿಲ್ ಹೀಗೆ ಜನಸಾಮಾನ್ಯರ ಅಗತ್ಯತೆಗಳ ಬೆಲೆ ಏರಿಸಿ ಬರೆ ಎಳೆದಿದೆ. ಈಗ ಜನನ-ಮರಣ ಪ್ರಮಾಣ ಪತ್ರದ ಶುಲ್ಕವೂ ಸಾಲದಾಯಿತೇ? ಎಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.10ರಷ್ಟು ತೆರಿಗೆ ಹಂಚಿಕೆ ಪಾಲು ಅಧಿಕಗೊಳಿಸಿ ಅನುದಾನ ಒದಗಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರದ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು