3:37 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಜಾನಪದ ಸಾಹಿತ್ಯ ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ: ಕೆ.ಪಿ. ಶೆಣೈ

10/11/2021, 15:35

ಕಾರ್ಕಳ(reporterkarnataka.com): ಜಾನಪದ ಸಾಹಿತ್ಯ ಅನ್ನುವುದು ನಮ್ಮ ಹಿರಿಯರಿಂದ ಬಂದಿದ್ದು. ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ. ಲಿಖಿತ ರೂಪದಲ್ಲಿ ಇಲ್ಲದೆ ಬಾಯಿಯಿಂದ ಬಾಯಿಗೆ ಹರಡಿರುವ ಅತ್ಯಂತ ಶ್ರೀಮಂತ ಸಾಹಿತ್ಯವಾಗಿದೆ. 
ಕೆ.ಪಿ.ಶೆಣೈ ಹೇಳಿದರು. ಅವರು ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಂಗಣ ಎಸ್.ವಿ.ಟಿ ಕಾರ್ಕಳದಲ್ಲಿ ಜರುಗಿದ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಇದರ ಕಾರ್ಕಳ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 

ನೂತನ ತಾಲೂಕು ಅಧ್ಯಕ್ಷರಾಗಿ ದೇವದಾಸ್ ಹಾಗೂ ತಂಡ ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷತೆಯನ್ನು ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ  ಡಾ.ಗಣೇಶ್ ಗಂಗೊಳ್ಳಿ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಕನ್ನಡ ಜಾನಪದ ಪರಿಷತ್ ಕರಾವಳಿ ಜಿಲ್ಲೆಗಳ ವಿಭಾಗೀಯ ಸಂಚಾಲಕಿ ಡಾ. ಭಾರತಿ ಮರವಂತೆ ಶುಭಸಂಸನೆ ಗೈದರು.

ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕಿನ ನಿಕಟಪೂರ್ವಾಧ್ಯಕ್ಷ  ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಎಸ್.ವಿ‌.ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮದಾಸ ಪ್ರಭು, ಎಸ್.ವಿ‌.ಟಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಯೋಗೇಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಸಂಚಾಲಕ ಚಂದ್ರನಾಥ್ ಬಜಗೋಳಿ ಸ್ವಾಗತಿಸಿ, 

ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಮಂಜುನಾಥ್ ಕೆ. ಶಿವಪುರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು