3:39 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಜನಪರ ಹೋರಾಟ ಹತ್ತಿಕ್ಕುವ ಆರೋಪ: ಪೊಲೀಸ್ ಕಮೀಷನರ್ ವರ್ಗಾವಣೆ ಆಗ್ರಹಿಸಿ ಕಾವೂರಿನಲ್ಲಿ ಪ್ರತಿಭಟನೆ

11/12/2024, 12:32

ಮಂಗಳೂರು(reporterkarnataka.com):ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಾಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್‌ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.


ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್ ರವರಿಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ, ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಢನೀಯ ಕಮೀಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.
ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ. ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು.
ಹೋರಾಟದ ನೇತೃತ್ವವನ್ನು ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು