9:04 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಜನಪರ ಹೋರಾಟ ಹತ್ತಿಕ್ಕುವ ಆರೋಪ: ಪೊಲೀಸ್ ಕಮೀಷನರ್ ವರ್ಗಾವಣೆ ಆಗ್ರಹಿಸಿ ಕಾವೂರಿನಲ್ಲಿ ಪ್ರತಿಭಟನೆ

11/12/2024, 12:32

ಮಂಗಳೂರು(reporterkarnataka.com):ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಾಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್‌ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.


ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್ ರವರಿಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ, ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಢನೀಯ ಕಮೀಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.
ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ. ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು.
ಹೋರಾಟದ ನೇತೃತ್ವವನ್ನು ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು