11:33 AM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ

22/05/2021, 17:14


ಮಂಡ್ಯ(reporterkarnataka news)

ಜಾನಪದ ವಿದ್ವಾಂಸ,  ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು.

1936 ಅಕ್ಟೋಬರ್ 16ರಂದು ರಾಮಣ್ಣ ಗೌಡ ಮತ್ತು ಚನ್ನಮ್ಮ ದಂಪತಿಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಜನಿಸಿದರು.

 ಮೈಸೂರಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿ, ವಿಶ್ವವಿದ್ಯಾನಿಲಯಗಳಿಗೂ ಮುನ್ನವೇ ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯದಲ್ಲಿ ತೊಡಗಿ 1959ರಲ್ಲಿ “ಜಾನಪದ ಅಕಾಡೆಮಿ” ಸ್ಥಾಪಿಸಿದರು.

 ಅವರ ಸಂಪಾದನಾ ಕೃತಿಗಳು 
೧.ಜಾನಪದ ಪ್ರೇಮಗೀತೆಗಳು
೨.ಜೇನ ಹನಿಗಳು
೩.ಆಯ್ದ ನಾಡ ಹಾಡುಗಳು
೪.ಜನಪ್ರಿಯ ಜಾನಪದ ಗೀತೆಗಳು ಇತ್ಯಾದಿ ಮುವತ್ನಾಲ್ಕುಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 9-00 ಗಂಟೆಗೆ ಸ್ವಗ್ರಾಮ ಕದಬಹಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಪತ್ನಿ ಲಲಿತಮ್ಮ ತಿಳಿಸಿದ್ದಾರೆ.

 ಮಗಳು ಡಾ. ದೀಪಿಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗ ತುಷಾರ್ ಎಂಬಿಎ ಪದವೀಧರ ನಾಗಿದ್ದು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು