5:36 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ

22/05/2021, 17:14


ಮಂಡ್ಯ(reporterkarnataka news)

ಜಾನಪದ ವಿದ್ವಾಂಸ,  ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು.

1936 ಅಕ್ಟೋಬರ್ 16ರಂದು ರಾಮಣ್ಣ ಗೌಡ ಮತ್ತು ಚನ್ನಮ್ಮ ದಂಪತಿಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಜನಿಸಿದರು.

 ಮೈಸೂರಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿ, ವಿಶ್ವವಿದ್ಯಾನಿಲಯಗಳಿಗೂ ಮುನ್ನವೇ ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯದಲ್ಲಿ ತೊಡಗಿ 1959ರಲ್ಲಿ “ಜಾನಪದ ಅಕಾಡೆಮಿ” ಸ್ಥಾಪಿಸಿದರು.

 ಅವರ ಸಂಪಾದನಾ ಕೃತಿಗಳು 
೧.ಜಾನಪದ ಪ್ರೇಮಗೀತೆಗಳು
೨.ಜೇನ ಹನಿಗಳು
೩.ಆಯ್ದ ನಾಡ ಹಾಡುಗಳು
೪.ಜನಪ್ರಿಯ ಜಾನಪದ ಗೀತೆಗಳು ಇತ್ಯಾದಿ ಮುವತ್ನಾಲ್ಕುಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 9-00 ಗಂಟೆಗೆ ಸ್ವಗ್ರಾಮ ಕದಬಹಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಪತ್ನಿ ಲಲಿತಮ್ಮ ತಿಳಿಸಿದ್ದಾರೆ.

 ಮಗಳು ಡಾ. ದೀಪಿಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗ ತುಷಾರ್ ಎಂಬಿಎ ಪದವೀಧರ ನಾಗಿದ್ದು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು