11:43 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ

22/05/2021, 17:14


ಮಂಡ್ಯ(reporterkarnataka news)

ಜಾನಪದ ವಿದ್ವಾಂಸ,  ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು.

1936 ಅಕ್ಟೋಬರ್ 16ರಂದು ರಾಮಣ್ಣ ಗೌಡ ಮತ್ತು ಚನ್ನಮ್ಮ ದಂಪತಿಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಜನಿಸಿದರು.

 ಮೈಸೂರಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿ, ವಿಶ್ವವಿದ್ಯಾನಿಲಯಗಳಿಗೂ ಮುನ್ನವೇ ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯದಲ್ಲಿ ತೊಡಗಿ 1959ರಲ್ಲಿ “ಜಾನಪದ ಅಕಾಡೆಮಿ” ಸ್ಥಾಪಿಸಿದರು.

 ಅವರ ಸಂಪಾದನಾ ಕೃತಿಗಳು 
೧.ಜಾನಪದ ಪ್ರೇಮಗೀತೆಗಳು
೨.ಜೇನ ಹನಿಗಳು
೩.ಆಯ್ದ ನಾಡ ಹಾಡುಗಳು
೪.ಜನಪ್ರಿಯ ಜಾನಪದ ಗೀತೆಗಳು ಇತ್ಯಾದಿ ಮುವತ್ನಾಲ್ಕುಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 9-00 ಗಂಟೆಗೆ ಸ್ವಗ್ರಾಮ ಕದಬಹಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಪತ್ನಿ ಲಲಿತಮ್ಮ ತಿಳಿಸಿದ್ದಾರೆ.

 ಮಗಳು ಡಾ. ದೀಪಿಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗ ತುಷಾರ್ ಎಂಬಿಎ ಪದವೀಧರ ನಾಗಿದ್ದು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು