7:06 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ

22/05/2021, 17:14


ಮಂಡ್ಯ(reporterkarnataka news)

ಜಾನಪದ ವಿದ್ವಾಂಸ,  ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು.

1936 ಅಕ್ಟೋಬರ್ 16ರಂದು ರಾಮಣ್ಣ ಗೌಡ ಮತ್ತು ಚನ್ನಮ್ಮ ದಂಪತಿಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಜನಿಸಿದರು.

 ಮೈಸೂರಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿ, ವಿಶ್ವವಿದ್ಯಾನಿಲಯಗಳಿಗೂ ಮುನ್ನವೇ ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯದಲ್ಲಿ ತೊಡಗಿ 1959ರಲ್ಲಿ “ಜಾನಪದ ಅಕಾಡೆಮಿ” ಸ್ಥಾಪಿಸಿದರು.

 ಅವರ ಸಂಪಾದನಾ ಕೃತಿಗಳು 
೧.ಜಾನಪದ ಪ್ರೇಮಗೀತೆಗಳು
೨.ಜೇನ ಹನಿಗಳು
೩.ಆಯ್ದ ನಾಡ ಹಾಡುಗಳು
೪.ಜನಪ್ರಿಯ ಜಾನಪದ ಗೀತೆಗಳು ಇತ್ಯಾದಿ ಮುವತ್ನಾಲ್ಕುಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 9-00 ಗಂಟೆಗೆ ಸ್ವಗ್ರಾಮ ಕದಬಹಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಪತ್ನಿ ಲಲಿತಮ್ಮ ತಿಳಿಸಿದ್ದಾರೆ.

 ಮಗಳು ಡಾ. ದೀಪಿಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗ ತುಷಾರ್ ಎಂಬಿಎ ಪದವೀಧರ ನಾಗಿದ್ದು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು