8:46 AM Thursday7 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

01/02/2025, 21:43

ಮಂಗಳೂರು(reporterkarnataka.com): ಕೇಂದ್ರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
12 ಲಕ್ಷ ರೂ.ವರೆಗೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ. ಕಳೆದ 10 ವರ್ಷಗಳಿಂದಲೂ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಬಡವರು, ರೈತರು, ಯುವಕರು, ಮಹಿಳೆಯರ ಬಾಳು ಹಸನಾಗಿಸುವ ಮಹತ್ವದ ಯಾವುದೇ ಯೋಜನೆಗಳಲ್ಲಿಲ್ಲ. ನಮ್ಮಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇಲ್ಲಿನ ಸಂಸದರು ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಅವರು ಆಯ್ಕೆಯಾಗಿದ್ದರೂ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು