7:48 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

01/02/2025, 21:43

ಮಂಗಳೂರು(reporterkarnataka.com): ಕೇಂದ್ರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
12 ಲಕ್ಷ ರೂ.ವರೆಗೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ. ಕಳೆದ 10 ವರ್ಷಗಳಿಂದಲೂ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಬಡವರು, ರೈತರು, ಯುವಕರು, ಮಹಿಳೆಯರ ಬಾಳು ಹಸನಾಗಿಸುವ ಮಹತ್ವದ ಯಾವುದೇ ಯೋಜನೆಗಳಲ್ಲಿಲ್ಲ. ನಮ್ಮಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇಲ್ಲಿನ ಸಂಸದರು ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಅವರು ಆಯ್ಕೆಯಾಗಿದ್ದರೂ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು