10:31 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

01/02/2025, 21:43

ಮಂಗಳೂರು(reporterkarnataka.com): ಕೇಂದ್ರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
12 ಲಕ್ಷ ರೂ.ವರೆಗೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ. ಕಳೆದ 10 ವರ್ಷಗಳಿಂದಲೂ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಬಡವರು, ರೈತರು, ಯುವಕರು, ಮಹಿಳೆಯರ ಬಾಳು ಹಸನಾಗಿಸುವ ಮಹತ್ವದ ಯಾವುದೇ ಯೋಜನೆಗಳಲ್ಲಿಲ್ಲ. ನಮ್ಮಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇಲ್ಲಿನ ಸಂಸದರು ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಅವರು ಆಯ್ಕೆಯಾಗಿದ್ದರೂ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು