1:36 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಜನವರಿ 19ರಿಂದ 3 ದಿನಗಳ ಕಾಲ ಮಂಗಳೂರು ಲಿಟ್‌ ಫೆಸ್ಟ್‌: 60ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗಿ

17/01/2024, 23:10

ಮಂಗಳೂರು(reporterkarnataka.com): ಮಂಗಳೂರು ಲಿಟ್‌ ಫೆಸ್ಟ್‌ನ 6ನೇ ಆವೃತ್ತಿಯು ಜನವರಿ 19, 20 ಮತ್ತು 21 ರಂದು 3 ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜರುಗಲಿದೆ.
ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು ವೇದಿಕೆಗಳು ಮತ್ತು ಹರಟೆ ಕಟ್ಟೆ ಇವುಗಳಲ್ಲಿ 60 ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗವಹಿಸಲಿದ್ದಾರೆ.
ಈ ಬಾರಿಯ ʼThe Idea of Bharath’ ಪ್ರಶಸ್ತಿಗೆ ʼವನಿತಾ ಸೇವಾ ಸಮಾಜʼ, ಧಾರವಾಡ ಈ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ.
19ರಂದು ಸಂಜೆ 5ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾದ ಲಕ್ಷ್ಮೀಶ ತೋಳ್ಪಾಡಿ, ಹೆಸರಾಂತ ಕಲಾವಿದೆ ರಾಧೆ ಜಗ್ಗಿ, ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಸಂಸ್ಥೆ (ಐಸಿಎಸ್ಎಸ್ಆರ್) ಸದಸ್ಯ ಕಾರ್ಯದರ್ಶಿ ಡಾ. ಧನಂಜಯ ಸಿಂಗ್, ರಕ್ಷಣಾ ಸಚಿವರ ಸಲಹೆಗಾರ ಲೆ. ಜ. ವಿನೋದ ಖಂಡಾರೆ, ನಿಟ್ಟೆ ವಿಶ್ವವಿದ್ಯಾಲಯದ ಡಾ. ವಿನಯ್‌ ಹೆಗ್ಡೆ, ಮಿಥಿಕ್‌ ಸೊಸೈಟಿಯ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ಹೆಸರಾಂತ ಭರತನಾಟ್ಯ ಕಲಾವಿದೆ ರಾಧೆ ಜಗ್ಗಿ (19 ಸಾಯಂಕಾಲ) ಮತ್ತು ಶಾಸ್ತ್ರೀಯ ಸಂಗೀತ ಕಲಾವಿದರಾದ ಸಂದೀಪ್‌ ನಾರಾಯಣ್‌ (20 ಸಾಯಂಕಾಲ) ಕಾರ್ಯಕ್ರಮ ನಡೆಯಲಿದೆ. ಸಿನಿಮಾ ಪ್ರದರ್ಶನ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಕಾರ್ಕಳದ ವಂದನಾ ರೈ ಅವರಿಂದ ಮಕ್ಕಳಿಗಾಗಿ ʼಚಿಣ್ಣರ ಅಂಗಳʼ ನಡೆಯಲಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಕ್ಲೇ ಮಾಡಲಿಂಗ್‌, ದೇಶೀ ಆಟಗಳು ಸೇರಿದಂತೆ ಲೇಖಕರು ಮತ್ತು ಪ್ರಮುಖರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.
ಸಾಹಿತ್ಯ ಲೋಕದ ಮೂವರು ಸಾಧಕರು, ಕುವೆಂಪು, ಬೇಂದ್ರೆ ಮತ್ತು ಪಂಜೆ ಮಂಗೇಶರಾಯರ ಕುರಿತು ವಿಶೇಷ ಅವಧಿಗಳು ಜರುಗಲಿವೆ.
ವಾಗ್ಮಿಗಳು, ಸಾಹಿತಿಗಳು, ಸಂಶೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಭಾರತ್ ಫೌಂಡೇಶನ್ ನ ,ಟ್ರಸ್ಟಿ ಗಳಾದ ಶ್ರಿರಾಜ್ ಗುಡಿ,ಸುನಿಲ್ ಕುಲಕರ್ಣಿ, ಆಯೋಜಕರು ಗಳಾದ ದುರ್ಗಾ ಪ್ರಸಾದ್ ಕಟೀಲ್,ಸುಜಿತ್ ಪ್ರತಾಪ್, ಈಶ್ವರ್ ಶೆಟ್ಟಿ, ದಿಶಾ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು