4:20 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಜಂಗಮಸೋವೇನಹಳ್ಳಿ: ನಿದ್ದೆಗೆಡಿಸಿದ ಹುಚ್ಚು ನಾಯಿ ಹಾವಳಿ; ಮಕ್ಕಳು ಸೇರಿ 7 ಜನರ ಮೇಲೆ ದಾಳಿ

21/04/2022, 19:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೆನಹಳ್ಳಿಯಲ್ಲಿ,ಹುಚ್ಚುನಾಯಿ ಆರೇಳು ಜನರನ್ನ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. 


ಏ. 20ರಂದು ರಾತ್ರಿ ಮನೆಯಂಗಳದಲ್ಲಿ ಮಲಗಿರೋರ ಮೇಲೆ ನಾಯಿ ಎರಗಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ. 

ಗ್ರಾಮದಲ್ಲಿ ಹುಚ್ಚು ನಾಯಿ ಕಡಿತಕ್ಕೆ 5 ಮಂದಿ ಮಕ್ಕಳು ಸೇರಿದಂತೆ ಒಟ್ಟು 7 ಜನ ತುತ್ತಾಗಿದ್ದರೆಂದು, ಗ್ರಾಮದ  ಕೆಲವರು ತಿಳಿಸಿದ್ದಾರೆ. ಗ್ರಾಮ ಹಾಗೂ ಗ್ರಾಮದ ಸುತ್ತಮುತ್ತ ಕೆಲ ದಿನಗಳಿಂದ ಹುಚ್ಚು ನಾಯಿ ಗ್ರಾಮದಲ್ಲಿ ಅಲೆದಾಡುತ್ತಿದ್ದು, ಅದು ನಾಯಿಗಳನ್ನ ಹಾಗೂ ದನಕರು ಮತ್ತು ಮನುಷ್ಯರ  ಮೇಲೆ ನಿರಂತರ ದಾಳಿ ಮಾಡುತ್ತಿದೆ ಎಂದು ದೂರಲಾಗಿದೆ. ನಾಯಿಯು ಹುಚ್ಚು ಸೋಂಕುನಿಂದ ಬಳಲುತಿದ್ದು, ಅದು ಕಂಡ ಕಂಡವರ ಮೇಲೆ ಎರಗುತ್ತಿದೆ ಮತ್ತು ದನ ಕರುಗಳ ಮೇಲೇ ನಿರಂತರವಾಗಿ ದಾಳಿ ಮಾಡಿ ಗಾಯಗೊಳಿಸಿದೆ. ಇದು ತೀರಾ ಅಪಾಯಕಾರಿ ಸನ್ನಿವೇಶವಾಗಿದ್ದು, ಮಕ್ಕಳು ಮಹಿಳೆಯರು ಜೀವವನ್ನು ಕೈಯಲ್ಲಿಡಿದೇ ಜೀವಿಸುವಂತಹ ಆತಂಕ ಸೃಷ್ಟಿಯಾಗಿದೆ  ಎಂದು ಗ್ರಾಮದ ಹಿರಿಯರು ಹೇಳಿಕೊಂಡಿದ್ದಾರೆ.ಗ್ರಾಪಂ ಅಧಿಕಾರಿಗಳು ಶೀಘ್ರವೇ ನಾಯಿಯನ್ನು ಸೆರೆಹಿಡಿದು ಸೂಕ್ತ ಕ್ರಮ ಜರುಗಿಸಬೇಕಿದೆ, ಹುಚ್ಚು ನಾಯಿ ದಾಳಿಗೊಳಗಾದವರಿಗೆ ಅಗತ್ಯ ನೆರವನ್ನು, ಗ್ರಾಪಂ ಅಧಿಕಾರಿಗಳು ಶೀಘ್ರವೇ ಒದಗಿಸಬೇಕೆಂದು ಗ್ರಾಮಸ್ಥರು ಈ ಮೂಲಕ ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಭೆಟ್ಟಿ ನೀಡಿ ವಸ್ಥು ಸ್ತಿತಿಯನ್ನು,ಮನವರಿಕೆ ಮಾಡಿಕೊಂಡು,ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು