10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಂಗಮಸೋವೇನಹಳ್ಳಿ: ನಿದ್ದೆಗೆಡಿಸಿದ ಹುಚ್ಚು ನಾಯಿ ಹಾವಳಿ; ಮಕ್ಕಳು ಸೇರಿ 7 ಜನರ ಮೇಲೆ ದಾಳಿ

21/04/2022, 19:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೆನಹಳ್ಳಿಯಲ್ಲಿ,ಹುಚ್ಚುನಾಯಿ ಆರೇಳು ಜನರನ್ನ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. 


ಏ. 20ರಂದು ರಾತ್ರಿ ಮನೆಯಂಗಳದಲ್ಲಿ ಮಲಗಿರೋರ ಮೇಲೆ ನಾಯಿ ಎರಗಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ. 

ಗ್ರಾಮದಲ್ಲಿ ಹುಚ್ಚು ನಾಯಿ ಕಡಿತಕ್ಕೆ 5 ಮಂದಿ ಮಕ್ಕಳು ಸೇರಿದಂತೆ ಒಟ್ಟು 7 ಜನ ತುತ್ತಾಗಿದ್ದರೆಂದು, ಗ್ರಾಮದ  ಕೆಲವರು ತಿಳಿಸಿದ್ದಾರೆ. ಗ್ರಾಮ ಹಾಗೂ ಗ್ರಾಮದ ಸುತ್ತಮುತ್ತ ಕೆಲ ದಿನಗಳಿಂದ ಹುಚ್ಚು ನಾಯಿ ಗ್ರಾಮದಲ್ಲಿ ಅಲೆದಾಡುತ್ತಿದ್ದು, ಅದು ನಾಯಿಗಳನ್ನ ಹಾಗೂ ದನಕರು ಮತ್ತು ಮನುಷ್ಯರ  ಮೇಲೆ ನಿರಂತರ ದಾಳಿ ಮಾಡುತ್ತಿದೆ ಎಂದು ದೂರಲಾಗಿದೆ. ನಾಯಿಯು ಹುಚ್ಚು ಸೋಂಕುನಿಂದ ಬಳಲುತಿದ್ದು, ಅದು ಕಂಡ ಕಂಡವರ ಮೇಲೆ ಎರಗುತ್ತಿದೆ ಮತ್ತು ದನ ಕರುಗಳ ಮೇಲೇ ನಿರಂತರವಾಗಿ ದಾಳಿ ಮಾಡಿ ಗಾಯಗೊಳಿಸಿದೆ. ಇದು ತೀರಾ ಅಪಾಯಕಾರಿ ಸನ್ನಿವೇಶವಾಗಿದ್ದು, ಮಕ್ಕಳು ಮಹಿಳೆಯರು ಜೀವವನ್ನು ಕೈಯಲ್ಲಿಡಿದೇ ಜೀವಿಸುವಂತಹ ಆತಂಕ ಸೃಷ್ಟಿಯಾಗಿದೆ  ಎಂದು ಗ್ರಾಮದ ಹಿರಿಯರು ಹೇಳಿಕೊಂಡಿದ್ದಾರೆ.ಗ್ರಾಪಂ ಅಧಿಕಾರಿಗಳು ಶೀಘ್ರವೇ ನಾಯಿಯನ್ನು ಸೆರೆಹಿಡಿದು ಸೂಕ್ತ ಕ್ರಮ ಜರುಗಿಸಬೇಕಿದೆ, ಹುಚ್ಚು ನಾಯಿ ದಾಳಿಗೊಳಗಾದವರಿಗೆ ಅಗತ್ಯ ನೆರವನ್ನು, ಗ್ರಾಪಂ ಅಧಿಕಾರಿಗಳು ಶೀಘ್ರವೇ ಒದಗಿಸಬೇಕೆಂದು ಗ್ರಾಮಸ್ಥರು ಈ ಮೂಲಕ ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಭೆಟ್ಟಿ ನೀಡಿ ವಸ್ಥು ಸ್ತಿತಿಯನ್ನು,ಮನವರಿಕೆ ಮಾಡಿಕೊಂಡು,ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು