5:27 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಜಂಗಮರೆಂದರೆ ಯಾರು?

08/10/2023, 20:32

ಜಂಗಮರೆಂದರೆ ಯಾರು? ಯಾರು??
ಯಾರು? ಯಾರು?? ಜಂಗಮರೆಂದರೆ!! ಪ!!
ಎಲ್ಲವನ ಕೊಟ್ಟು ಇಹದೆಲ್ಲವನ ಬಿಟ್ಟು
ಬಲ್ಲಿದನ ಜೋಳಿಗೆಯ ಕರದಲಿ ಪಿಡಿದು
ಕಲ್ಲು ಮನಸುಗಳ ಹೂವಾಗಿಸುವದೆಡೆಗೆ
ಮಲ್ಲಿನಾಥನ ಮಗನಾಗಿ ಯೋಗಿಯಾದವರೆ!! ಜಂಗಮ!!

ಬಣ್ಣ ಬಣ್ಣಗಳ ಕನಸುಗಳನೆಲ್ಲ ತೊರೆದು
ಬಿನ್ನಹದಿಂದಲೆ ಜೀವನದ ಸಾರವ ಸಾರೊ
ಕಣ್ಣು ಕಣ್ಣುಗಳ ತೆರೆಸೊ ಜ್ಞಾನ ಭಂಡಾರವು
ಹುಣ್ಣುಮೆಯ ತಂಪನೇ ಚೆಲ್ಲೊ ಕಾಂತಿಯೆ!! ಜಂಗಮ!!

ಬದುಕಿನ ತಿರುಳನ್ನು ವಚನದಲಿ ಸಾರುತ್ತ
ಹೃದಯಗಳಲಿ ಅಮೃತವನೆ ಧಾರೆಯೆರೆವ
ಹದಿಬದೆಯ ಧರ್ಮದ ತಿರುಳನೆ ಬಿತ್ತುವ
ವಿಧಿತದಲಿ ಸರ್ವರಾ ಬಾಳನೆ ಬೆಳಗುವವರೆ!! ಜಂಗಮ!!

ಕಾಮ ಕ್ರೋಧ ಲೋಭ ಮೋಹ ಮತ್ಸರವ
ಯಾಮದಿಂದಲೆ ತೊರೆದು ಸಾಧುವಾಗಿಹ
ಸೋಮ ಸೂರ್ಯರಂತೆಯೆ ಜಗ ಕಾಯುವ
ನಾಮ ನಿರ್ದೇಶಿತ ಕಾವಿಯ ಕಾರ್ಮಿಕರೆ!! ಜಂಗಮ!!

– ಅನಿತಾ ಸಾಲಿಮಠ ಅಂತರಗಂಗೆ
(ವಿದ್ಯಾ ಚೇತನ ಪದವಿ ಪೂರ್ವ ಕಾಲೇಜು ಲಿಂಗಸೂರ್)

ಇತ್ತೀಚಿನ ಸುದ್ದಿ

ಜಾಹೀರಾತು