9:36 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು…

ಇತ್ತೀಚಿನ ಸುದ್ದಿ

ಜಂಗಮರೆಂದರೆ ಯಾರು?

08/10/2023, 20:32

ಜಂಗಮರೆಂದರೆ ಯಾರು? ಯಾರು??
ಯಾರು? ಯಾರು?? ಜಂಗಮರೆಂದರೆ!! ಪ!!
ಎಲ್ಲವನ ಕೊಟ್ಟು ಇಹದೆಲ್ಲವನ ಬಿಟ್ಟು
ಬಲ್ಲಿದನ ಜೋಳಿಗೆಯ ಕರದಲಿ ಪಿಡಿದು
ಕಲ್ಲು ಮನಸುಗಳ ಹೂವಾಗಿಸುವದೆಡೆಗೆ
ಮಲ್ಲಿನಾಥನ ಮಗನಾಗಿ ಯೋಗಿಯಾದವರೆ!! ಜಂಗಮ!!

ಬಣ್ಣ ಬಣ್ಣಗಳ ಕನಸುಗಳನೆಲ್ಲ ತೊರೆದು
ಬಿನ್ನಹದಿಂದಲೆ ಜೀವನದ ಸಾರವ ಸಾರೊ
ಕಣ್ಣು ಕಣ್ಣುಗಳ ತೆರೆಸೊ ಜ್ಞಾನ ಭಂಡಾರವು
ಹುಣ್ಣುಮೆಯ ತಂಪನೇ ಚೆಲ್ಲೊ ಕಾಂತಿಯೆ!! ಜಂಗಮ!!

ಬದುಕಿನ ತಿರುಳನ್ನು ವಚನದಲಿ ಸಾರುತ್ತ
ಹೃದಯಗಳಲಿ ಅಮೃತವನೆ ಧಾರೆಯೆರೆವ
ಹದಿಬದೆಯ ಧರ್ಮದ ತಿರುಳನೆ ಬಿತ್ತುವ
ವಿಧಿತದಲಿ ಸರ್ವರಾ ಬಾಳನೆ ಬೆಳಗುವವರೆ!! ಜಂಗಮ!!

ಕಾಮ ಕ್ರೋಧ ಲೋಭ ಮೋಹ ಮತ್ಸರವ
ಯಾಮದಿಂದಲೆ ತೊರೆದು ಸಾಧುವಾಗಿಹ
ಸೋಮ ಸೂರ್ಯರಂತೆಯೆ ಜಗ ಕಾಯುವ
ನಾಮ ನಿರ್ದೇಶಿತ ಕಾವಿಯ ಕಾರ್ಮಿಕರೆ!! ಜಂಗಮ!!

– ಅನಿತಾ ಸಾಲಿಮಠ ಅಂತರಗಂಗೆ
(ವಿದ್ಯಾ ಚೇತನ ಪದವಿ ಪೂರ್ವ ಕಾಲೇಜು ಲಿಂಗಸೂರ್)

ಇತ್ತೀಚಿನ ಸುದ್ದಿ

ಜಾಹೀರಾತು