7:21 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ಮಂಗಳೂರು ಇಸ್ಕಾನ್‌ನಲ್ಲಿ ಆ.15, 16ರಂದು ಜನ್ಮಾಷ್ಟಮಿ ಸಂಭ್ರಮ: ಆಳ್ವಾಸ್ ನ 300 ಮಂದಿ ಕಲಾವಿದರಿಂದ ಶ್ರೀಕೃಷ್ಣ ವೈಭನ

13/08/2025, 22:47

ಮಂಗಳೂರು(reporterkarnataka.com): ನಗರದ ಕೋಡಿಯಲ್‌ಬೈಲ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್‌ನಲ್ಲಿ ಆ.15 ಮತ್ತು 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು.
ಅವರು ಇಂದು ನಗರದ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಆ.15 ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಣ್ಣ, ಉಯ್ಯಾಲೆ ಸೇವೆಗಳು, ಧಾರ್ಮಿಕ ಕಾರ್ಯಕ್ರಮಗಳು, ಮಹಾಭಿಷೇಕ, ಭಜನೆ, ಆಧ್ಯಾತ್ಮಿಕ ಪ್ರಮಚನಗಳು ನಡೆಯಲಿವೆ ಎಂದರು.
ಆ.16ರಂದು ಮಧ್ಯಾಹ್ನದ ಬಳಿಕ ಶಾರದಾ ವಿದ್ಯಾಲಯ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹಬ್ಬದ ಫುಡ್ ಸ್ಟಾಲ್, ಭಕ್ತಿಗೀತೆ, ರಸಮಂಜರಿ ನಡೆಯಲಿದ್ದು, ಸಂಜೆ 6 ಗಂಟೆಯಿಂದ ಆಳ್ವಾಸ್ ವಿದ್ಯಾಸಂಸ್ಥೆಯಿಂದ 300 ಜನ ಕಲಾವಿದರನ್ನು ಒಳಗೊಂಡಂತೆ ಶ್ರೀಕೃಷ್ಣ ವೈಭನ ಕಾರ್ಯಕ್ರಮ 2 ಗಂಟೆಗಳ ಕಾಲ ನಡೆಯಲಿದೆ. ಅಂದು ಮೈದಾನದಲ್ಲಿ ಅತಿ ಎತ್ತರದ ಕೃಷ್ಣನ ಆಕೃತಿಯನ್ನು ಪ್ರದರ್ಶಿಸಲಾಗುವುದು ಎಂದ ಅವರು ಅಂದು ರಾತ್ರಿ 10 ಗಂಟೆಗೆ ಮಹಾರುದ್ರ ಅಭಿಷೇಕ, ರಾತ್ರಿ 12 ಗಂಟೆಗೆ ಮಹಾಮಂಗಳಾರತಿ ಸೇವೆ ನಡೆಯಲಿದೆ ಎಂದು ಹೇಳಿದರು.
ಇಸ್ಕಾನ್‌ನ ಉಪಾಧ್ಯಕ್ಷ ಸನಂದನ ದಾಸ, ಸಂಚಾಲಕರುಗಳಾದ ಸುಂದರ ಗೌರ ದಾಸ, ಬಿ.ಜಿ. ಮನು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು