4:49 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ಮಂಗಳೂರು ಇಸ್ಕಾನ್‌ನಲ್ಲಿ ಆ.15, 16ರಂದು ಜನ್ಮಾಷ್ಟಮಿ ಸಂಭ್ರಮ: ಆಳ್ವಾಸ್ ನ 300 ಮಂದಿ ಕಲಾವಿದರಿಂದ ಶ್ರೀಕೃಷ್ಣ ವೈಭನ

13/08/2025, 22:47

ಮಂಗಳೂರು(reporterkarnataka.com): ನಗರದ ಕೋಡಿಯಲ್‌ಬೈಲ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್‌ನಲ್ಲಿ ಆ.15 ಮತ್ತು 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು.
ಅವರು ಇಂದು ನಗರದ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಆ.15 ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಣ್ಣ, ಉಯ್ಯಾಲೆ ಸೇವೆಗಳು, ಧಾರ್ಮಿಕ ಕಾರ್ಯಕ್ರಮಗಳು, ಮಹಾಭಿಷೇಕ, ಭಜನೆ, ಆಧ್ಯಾತ್ಮಿಕ ಪ್ರಮಚನಗಳು ನಡೆಯಲಿವೆ ಎಂದರು.
ಆ.16ರಂದು ಮಧ್ಯಾಹ್ನದ ಬಳಿಕ ಶಾರದಾ ವಿದ್ಯಾಲಯ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹಬ್ಬದ ಫುಡ್ ಸ್ಟಾಲ್, ಭಕ್ತಿಗೀತೆ, ರಸಮಂಜರಿ ನಡೆಯಲಿದ್ದು, ಸಂಜೆ 6 ಗಂಟೆಯಿಂದ ಆಳ್ವಾಸ್ ವಿದ್ಯಾಸಂಸ್ಥೆಯಿಂದ 300 ಜನ ಕಲಾವಿದರನ್ನು ಒಳಗೊಂಡಂತೆ ಶ್ರೀಕೃಷ್ಣ ವೈಭನ ಕಾರ್ಯಕ್ರಮ 2 ಗಂಟೆಗಳ ಕಾಲ ನಡೆಯಲಿದೆ. ಅಂದು ಮೈದಾನದಲ್ಲಿ ಅತಿ ಎತ್ತರದ ಕೃಷ್ಣನ ಆಕೃತಿಯನ್ನು ಪ್ರದರ್ಶಿಸಲಾಗುವುದು ಎಂದ ಅವರು ಅಂದು ರಾತ್ರಿ 10 ಗಂಟೆಗೆ ಮಹಾರುದ್ರ ಅಭಿಷೇಕ, ರಾತ್ರಿ 12 ಗಂಟೆಗೆ ಮಹಾಮಂಗಳಾರತಿ ಸೇವೆ ನಡೆಯಲಿದೆ ಎಂದು ಹೇಳಿದರು.
ಇಸ್ಕಾನ್‌ನ ಉಪಾಧ್ಯಕ್ಷ ಸನಂದನ ದಾಸ, ಸಂಚಾಲಕರುಗಳಾದ ಸುಂದರ ಗೌರ ದಾಸ, ಬಿ.ಜಿ. ಮನು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು