11:34 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ಇಸ್ಕಾನ್‌ನಲ್ಲಿ ಆ.15, 16ರಂದು ಜನ್ಮಾಷ್ಟಮಿ ಸಂಭ್ರಮ: ಆಳ್ವಾಸ್ ನ 300 ಮಂದಿ ಕಲಾವಿದರಿಂದ ಶ್ರೀಕೃಷ್ಣ ವೈಭನ

13/08/2025, 22:47

ಮಂಗಳೂರು(reporterkarnataka.com): ನಗರದ ಕೋಡಿಯಲ್‌ಬೈಲ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್‌ನಲ್ಲಿ ಆ.15 ಮತ್ತು 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು.
ಅವರು ಇಂದು ನಗರದ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಆ.15 ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಣ್ಣ, ಉಯ್ಯಾಲೆ ಸೇವೆಗಳು, ಧಾರ್ಮಿಕ ಕಾರ್ಯಕ್ರಮಗಳು, ಮಹಾಭಿಷೇಕ, ಭಜನೆ, ಆಧ್ಯಾತ್ಮಿಕ ಪ್ರಮಚನಗಳು ನಡೆಯಲಿವೆ ಎಂದರು.
ಆ.16ರಂದು ಮಧ್ಯಾಹ್ನದ ಬಳಿಕ ಶಾರದಾ ವಿದ್ಯಾಲಯ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹಬ್ಬದ ಫುಡ್ ಸ್ಟಾಲ್, ಭಕ್ತಿಗೀತೆ, ರಸಮಂಜರಿ ನಡೆಯಲಿದ್ದು, ಸಂಜೆ 6 ಗಂಟೆಯಿಂದ ಆಳ್ವಾಸ್ ವಿದ್ಯಾಸಂಸ್ಥೆಯಿಂದ 300 ಜನ ಕಲಾವಿದರನ್ನು ಒಳಗೊಂಡಂತೆ ಶ್ರೀಕೃಷ್ಣ ವೈಭನ ಕಾರ್ಯಕ್ರಮ 2 ಗಂಟೆಗಳ ಕಾಲ ನಡೆಯಲಿದೆ. ಅಂದು ಮೈದಾನದಲ್ಲಿ ಅತಿ ಎತ್ತರದ ಕೃಷ್ಣನ ಆಕೃತಿಯನ್ನು ಪ್ರದರ್ಶಿಸಲಾಗುವುದು ಎಂದ ಅವರು ಅಂದು ರಾತ್ರಿ 10 ಗಂಟೆಗೆ ಮಹಾರುದ್ರ ಅಭಿಷೇಕ, ರಾತ್ರಿ 12 ಗಂಟೆಗೆ ಮಹಾಮಂಗಳಾರತಿ ಸೇವೆ ನಡೆಯಲಿದೆ ಎಂದು ಹೇಳಿದರು.
ಇಸ್ಕಾನ್‌ನ ಉಪಾಧ್ಯಕ್ಷ ಸನಂದನ ದಾಸ, ಸಂಚಾಲಕರುಗಳಾದ ಸುಂದರ ಗೌರ ದಾಸ, ಬಿ.ಜಿ. ಮನು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು