10:02 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಮಂಗಳೂರು ಇಸ್ಕಾನ್‌ನಲ್ಲಿ ಆ.15, 16ರಂದು ಜನ್ಮಾಷ್ಟಮಿ ಸಂಭ್ರಮ: ಆಳ್ವಾಸ್ ನ 300 ಮಂದಿ ಕಲಾವಿದರಿಂದ ಶ್ರೀಕೃಷ್ಣ ವೈಭನ

13/08/2025, 22:47

ಮಂಗಳೂರು(reporterkarnataka.com): ನಗರದ ಕೋಡಿಯಲ್‌ಬೈಲ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್‌ನಲ್ಲಿ ಆ.15 ಮತ್ತು 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು.
ಅವರು ಇಂದು ನಗರದ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಆ.15 ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಣ್ಣ, ಉಯ್ಯಾಲೆ ಸೇವೆಗಳು, ಧಾರ್ಮಿಕ ಕಾರ್ಯಕ್ರಮಗಳು, ಮಹಾಭಿಷೇಕ, ಭಜನೆ, ಆಧ್ಯಾತ್ಮಿಕ ಪ್ರಮಚನಗಳು ನಡೆಯಲಿವೆ ಎಂದರು.
ಆ.16ರಂದು ಮಧ್ಯಾಹ್ನದ ಬಳಿಕ ಶಾರದಾ ವಿದ್ಯಾಲಯ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹಬ್ಬದ ಫುಡ್ ಸ್ಟಾಲ್, ಭಕ್ತಿಗೀತೆ, ರಸಮಂಜರಿ ನಡೆಯಲಿದ್ದು, ಸಂಜೆ 6 ಗಂಟೆಯಿಂದ ಆಳ್ವಾಸ್ ವಿದ್ಯಾಸಂಸ್ಥೆಯಿಂದ 300 ಜನ ಕಲಾವಿದರನ್ನು ಒಳಗೊಂಡಂತೆ ಶ್ರೀಕೃಷ್ಣ ವೈಭನ ಕಾರ್ಯಕ್ರಮ 2 ಗಂಟೆಗಳ ಕಾಲ ನಡೆಯಲಿದೆ. ಅಂದು ಮೈದಾನದಲ್ಲಿ ಅತಿ ಎತ್ತರದ ಕೃಷ್ಣನ ಆಕೃತಿಯನ್ನು ಪ್ರದರ್ಶಿಸಲಾಗುವುದು ಎಂದ ಅವರು ಅಂದು ರಾತ್ರಿ 10 ಗಂಟೆಗೆ ಮಹಾರುದ್ರ ಅಭಿಷೇಕ, ರಾತ್ರಿ 12 ಗಂಟೆಗೆ ಮಹಾಮಂಗಳಾರತಿ ಸೇವೆ ನಡೆಯಲಿದೆ ಎಂದು ಹೇಳಿದರು.
ಇಸ್ಕಾನ್‌ನ ಉಪಾಧ್ಯಕ್ಷ ಸನಂದನ ದಾಸ, ಸಂಚಾಲಕರುಗಳಾದ ಸುಂದರ ಗೌರ ದಾಸ, ಬಿ.ಜಿ. ಮನು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು