2:05 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ಇಸ್ಕಾನ್‌ನಲ್ಲಿ ಆ.15, 16ರಂದು ಜನ್ಮಾಷ್ಟಮಿ ಸಂಭ್ರಮ: ಆಳ್ವಾಸ್ ನ 300 ಮಂದಿ ಕಲಾವಿದರಿಂದ ಶ್ರೀಕೃಷ್ಣ ವೈಭನ

13/08/2025, 22:47

ಮಂಗಳೂರು(reporterkarnataka.com): ನಗರದ ಕೋಡಿಯಲ್‌ಬೈಲ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್‌ನಲ್ಲಿ ಆ.15 ಮತ್ತು 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು.
ಅವರು ಇಂದು ನಗರದ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಆ.15 ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಣ್ಣ, ಉಯ್ಯಾಲೆ ಸೇವೆಗಳು, ಧಾರ್ಮಿಕ ಕಾರ್ಯಕ್ರಮಗಳು, ಮಹಾಭಿಷೇಕ, ಭಜನೆ, ಆಧ್ಯಾತ್ಮಿಕ ಪ್ರಮಚನಗಳು ನಡೆಯಲಿವೆ ಎಂದರು.
ಆ.16ರಂದು ಮಧ್ಯಾಹ್ನದ ಬಳಿಕ ಶಾರದಾ ವಿದ್ಯಾಲಯ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹಬ್ಬದ ಫುಡ್ ಸ್ಟಾಲ್, ಭಕ್ತಿಗೀತೆ, ರಸಮಂಜರಿ ನಡೆಯಲಿದ್ದು, ಸಂಜೆ 6 ಗಂಟೆಯಿಂದ ಆಳ್ವಾಸ್ ವಿದ್ಯಾಸಂಸ್ಥೆಯಿಂದ 300 ಜನ ಕಲಾವಿದರನ್ನು ಒಳಗೊಂಡಂತೆ ಶ್ರೀಕೃಷ್ಣ ವೈಭನ ಕಾರ್ಯಕ್ರಮ 2 ಗಂಟೆಗಳ ಕಾಲ ನಡೆಯಲಿದೆ. ಅಂದು ಮೈದಾನದಲ್ಲಿ ಅತಿ ಎತ್ತರದ ಕೃಷ್ಣನ ಆಕೃತಿಯನ್ನು ಪ್ರದರ್ಶಿಸಲಾಗುವುದು ಎಂದ ಅವರು ಅಂದು ರಾತ್ರಿ 10 ಗಂಟೆಗೆ ಮಹಾರುದ್ರ ಅಭಿಷೇಕ, ರಾತ್ರಿ 12 ಗಂಟೆಗೆ ಮಹಾಮಂಗಳಾರತಿ ಸೇವೆ ನಡೆಯಲಿದೆ ಎಂದು ಹೇಳಿದರು.
ಇಸ್ಕಾನ್‌ನ ಉಪಾಧ್ಯಕ್ಷ ಸನಂದನ ದಾಸ, ಸಂಚಾಲಕರುಗಳಾದ ಸುಂದರ ಗೌರ ದಾಸ, ಬಿ.ಜಿ. ಮನು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು