2:01 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಜನ್ಮಾಷ್ಟಮಿ ಸಂಭ್ರಮ: ಕಡಲ ನಗರಿಯಲ್ಲಿ ಹೂವಿನ ವ್ಯಾಪಾರಕ್ಕೆ ಕೊಂಚ ಅಡ್ಡಿಯಾದ ಮಳೆರಾಯ

05/09/2023, 18:35

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಡಲನ ನಗರಿ ಮಂಗಳೂರಿನಲ್ಲಿ ಹೂವಿನ ವ್ಯಾಪಾರ ಭರದಿಂದ ಸಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಹೊರಜಿಲ್ಲೆಯ ವ್ಯಾಪಾರಿಗಳು ಹೂ ಮಾರಾಟದಲ್ಲಿ ತೊಡಗಿರುವುದು ಕಂಡು ಬಂತು. ಆದರೆ ಮಳೆ ಸ್ವಲ್ಪ ಅಡ್ಡಿಯಾಯಿತು.


ನಗರದ ಹೃದಯ ಭಾಗವಾದ ಹಂಪನಕಟ್ಟೆಯ ಪುರಭವನದ ಎರಡೂ ಬದಿಯ ಫುಟ್ ಪಾತ್ ನಲ್ಲಿ ಹೂವಿನ ವ್ಯಾಪಾರ ಮೇಳೈಸಿತು. ಆದರೆ ಇವತ್ತು ಬೆಳಗ್ಗಿನಿಂದ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಸರಾಗ ವ್ಯಾಪಾರಕ್ಕೆ ತೊಡಕಾಯಿತು. ಪುರಭವನದ ಸುತ್ತಮುತ್ತ, ಅಂಡರ್ ಪಾಸ್ ನ ಲೇಡಿಗೋಶನ್ ಬದಿಯಲ್ಲಿ ಹೂವಿನ ವ್ಯಾಪಾರಿಗಳು ಸೇವಂತಿಗೆ, ಗೊಂಡೆ ಹೂವು, ಕಾಕಡ, ಕನಕಾಂಬರ ಇಟ್ಟು ಗ್ತಾಹಕರನ್ನು ಆಕರ್ಷಿಸುತ್ತಿದ್ದರು. ಅದೇ ರೀತಿ ಲಾಲ್ ಭಾಗ್ ನಿಂದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿ ಹೊರ ಜಿಲ್ಲೆಗಳಿಂದ ಬಂದ ವ್ಯಾಪಾರಿಗಳು ಭರ್ಜರಿ ವ್ಯಾಪಾರ ನಡೆಸುತ್ತಿದ್ದರು. ಮಂಗಳೂರು ಸೆಂಟ್ರಲ್ ಮಾರ್ಕೆಟ್, ಉರ್ವ ಮಾರ್ಕೆಟ್, ಅಳಕೆ, ಬಿಜೈ, ಕಾರ್ ಸ್ಟ್ರೀಟ್‌ ಮಾರುಕಟ್ಟೆಗಳಲ್ಲಿ ಕೂಡ ಹೂವಿನ ವ್ಯಾಪಾರ ಭರ್ಜರಿ ಯಾಗಿ ನಡೆಯಿತು. ಹೂವಿನ ದರ ಕೂಡ ಕೊಂಚ ಜಾಸ್ತಿಯೇ ಇತ್ತು.

ಇತ್ತೀಚಿನ ಸುದ್ದಿ

ಜಾಹೀರಾತು