4:14 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಜನ್ಮಾಷ್ಟಮಿ ಸಂಭ್ರಮ: ಕಡಲ ನಗರಿಯಲ್ಲಿ ಹೂವಿನ ವ್ಯಾಪಾರಕ್ಕೆ ಕೊಂಚ ಅಡ್ಡಿಯಾದ ಮಳೆರಾಯ

05/09/2023, 18:35

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಡಲನ ನಗರಿ ಮಂಗಳೂರಿನಲ್ಲಿ ಹೂವಿನ ವ್ಯಾಪಾರ ಭರದಿಂದ ಸಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಹೊರಜಿಲ್ಲೆಯ ವ್ಯಾಪಾರಿಗಳು ಹೂ ಮಾರಾಟದಲ್ಲಿ ತೊಡಗಿರುವುದು ಕಂಡು ಬಂತು. ಆದರೆ ಮಳೆ ಸ್ವಲ್ಪ ಅಡ್ಡಿಯಾಯಿತು.


ನಗರದ ಹೃದಯ ಭಾಗವಾದ ಹಂಪನಕಟ್ಟೆಯ ಪುರಭವನದ ಎರಡೂ ಬದಿಯ ಫುಟ್ ಪಾತ್ ನಲ್ಲಿ ಹೂವಿನ ವ್ಯಾಪಾರ ಮೇಳೈಸಿತು. ಆದರೆ ಇವತ್ತು ಬೆಳಗ್ಗಿನಿಂದ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಸರಾಗ ವ್ಯಾಪಾರಕ್ಕೆ ತೊಡಕಾಯಿತು. ಪುರಭವನದ ಸುತ್ತಮುತ್ತ, ಅಂಡರ್ ಪಾಸ್ ನ ಲೇಡಿಗೋಶನ್ ಬದಿಯಲ್ಲಿ ಹೂವಿನ ವ್ಯಾಪಾರಿಗಳು ಸೇವಂತಿಗೆ, ಗೊಂಡೆ ಹೂವು, ಕಾಕಡ, ಕನಕಾಂಬರ ಇಟ್ಟು ಗ್ತಾಹಕರನ್ನು ಆಕರ್ಷಿಸುತ್ತಿದ್ದರು. ಅದೇ ರೀತಿ ಲಾಲ್ ಭಾಗ್ ನಿಂದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿ ಹೊರ ಜಿಲ್ಲೆಗಳಿಂದ ಬಂದ ವ್ಯಾಪಾರಿಗಳು ಭರ್ಜರಿ ವ್ಯಾಪಾರ ನಡೆಸುತ್ತಿದ್ದರು. ಮಂಗಳೂರು ಸೆಂಟ್ರಲ್ ಮಾರ್ಕೆಟ್, ಉರ್ವ ಮಾರ್ಕೆಟ್, ಅಳಕೆ, ಬಿಜೈ, ಕಾರ್ ಸ್ಟ್ರೀಟ್‌ ಮಾರುಕಟ್ಟೆಗಳಲ್ಲಿ ಕೂಡ ಹೂವಿನ ವ್ಯಾಪಾರ ಭರ್ಜರಿ ಯಾಗಿ ನಡೆಯಿತು. ಹೂವಿನ ದರ ಕೂಡ ಕೊಂಚ ಜಾಸ್ತಿಯೇ ಇತ್ತು.

ಇತ್ತೀಚಿನ ಸುದ್ದಿ

ಜಾಹೀರಾತು