2:20 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಜನಪ್ರತಿನಿಧಿಗಳು ಸದನದ ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು: ಸ್ಪೀಕರ್ ಖಾದರ್

29/12/2024, 11:25

ಮಂಗಳೂರು(reporterkarnataka.com): ಜನಪ್ರತಿನಿಧಿಗಳು
ಸದನದ ಒಳಗೆ ಮಾತ್ರವಲ್ಲ, ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಅದಕ್ಕಾಗಿ ಸದನ ಬಳಿಕವೂ ಕ್ಯಾಮರಾ ಚಿತ್ರೀಕರಣ ಮುಂದುವರಿಸುವ ಅವಶ್ಯಕತೆ ಇಲ್ಲ. ವಿಧಾನಸಭೆ ನಿಯಮದಂತೆ ಅಧಿವೇಶನ ವೇಳೆ ಮಾತ್ರ ಕ್ಯಾಮರಾ ರೆಕಾರ್ಡ್ ಮಾಡಲಾಗುತ್ತದೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದ ನಂತರ ಕ್ಯಾಮರಾ ರೆಕಾರ್ಡ್ ಮಾಡುತ್ತಿಲ್ಲ. ಅದನ್ನು ಆರಂಭಿಸುವ ಹೊಸ ಸಂಪ್ರದಾಯವನ್ನು ನಾನು ಜಾರಿಗೆ ತರುವುದಿಲ್ಲ. ಆದರೆ ಕಲಾಪದ ಬಳಿಕ ವರಾಂಡ ಮುಂತಾದ ಕಡೆಗಳಲ್ಲಿ ಕುಳಿತುಕೊಂಡು ಮಾತನಾಡುವಾಗಲೂ ಜನಪ್ರತಿನಿಧಿಗಳು ತಮ್ಮ ನಡವಳಿಕೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದು ಕಿವಿಮಾತು ಹೇಳಿದರು.
ಸಿ.ಟಿ.ರವಿ ಪ್ರಕರಣ ವಿಧಾನ ಪರಿಷತ್ ವ್ಯಾಪ್ತಿಗೆ ಬರುವುದರಿಂದ ಸ್ಥಳ ಮಹಜರಿಗೆ ಸಂಬಂಧಿಸಿದಂತೆ
ಪರಿಷತ್ ಸಭಾಪತಿಗಳೇ ನಿಯಮಾನುಸಾರ ತೀರ್ಮಾನ ಕೈಗೊಳ್ಳುತ್ತಾರೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕರಾಗಿರುವುದರಿಂದ ಅವರ ವಿಚಾರ ನನ್ನ ವ್ಯಾಪ್ತಿಗೆ ಬರುತ್ತದೆ. ಅವರು ಪ್ರಕರಣ ಬಗ್ಗೆ ದೂರು ನೀಡಿದ್ದು, ಅದನ್ನು ಪ್ರಿವಿಲೇಜ್ ಕಮಿಟಿಗೆ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಹಾಲಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ವಿಚಾರವನ್ನು ಶಾಸಕಾಂಗದ ಕಾರ್ಯದರ್ಶಿಗಳಿಂದ ಮಾಹಿತಿ ಪಡೆಯಲಾಗುವುದು ಎಂದರು.
*16 ವಿಧೇಯಕ ಪಾಸ್:*
ಬೆಳಗಾವಿಯಲ್ಲಿ ನಡೆದ 16ನೇ ವಿಧಾನಸಭೆಯ 5ನೇ ಅಧಿವೇಶನ 8 ದಿನಗಳ ಕಾಲ 63 ಗಂಟೆ 57 ನಿಮಿಷಗಳ ಕಾರ್ಯಕಲಾಪ ನಡೆಸಿದೆ. ಧನವಿನಿಯೋಗ ಸೇರಿ ಒಟ್ಟು 16 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
2024ನೇ ಸಾಲಿನ ಕರ್ನಾಟಕ ವಿಧಾನಮಂಡಲ(ಅನರ್ಹತಾ ನಿವಾರಣೆ)(ತಿದ್ದುಪಡಿ) ವಿಧೇಯಕ ಮತ್ತು 2024ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಮಂತರ ಯೋಜನೆ(ತಿದ್ದುಪಡಿ) ವಿಧೇಯಕಗಳನ್ನು ವಾಪಸ್ ಪಡೆಯಲಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ 49 ಸದಸ್ಯರು ಭಾಗವಹಿಸಿದ್ದು, 13 ಗಂಟೆ 11 ನಿಮಿಷಗಳ ಕಾಲ ಚರ್ಚೆ ನಡೆಸಲಾಗಿದೆ ಎಂದರು.
ರಾಜ್ಯದಲ್ಲಿ ಬಾಣಂತಿ ಸಾವು, ಅನುದಾನದ ಕೊರತೆ, ಅಭಿವೃದ್ಧಿ ಬಗ್ಗೆ ನಿಯಮ 60ರಡಿ ನಿಲುವಳಿ ಸೂಚನೆಯಲ್ಲಿ ನಡೆಸಲಾಗಿದೆ. ಒಟ್ಟು 3,004 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾದ 150 ಪ್ರಶ್ನೆಗಳ ಪೈಕಿ 137 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 444 ಗಮನ ಸೆಳೆಯುವ ಸೂಚನೆ ಪೈಕಿ 294 ಸೂಚನೆಗಳಿಗೆ ಉತ್ತರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 5 ಸೂಚನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಅವರು ವಿವರ ನೀಡಿದರು.
*ಮಂಗಳೂರು ಕ್ಷೇತ್ರಕ್ಕೆ 2 ಯೋಜನೆಗೆ ಸಂಪುಟ ಅಸ್ತು:* ನನ್ನ ಮಂಗಳೂರು ಅಸೆಂಬ್ಲಿ ಕ್ಷೇತ್ರಕ್ಕೆ 200 ಕೋಟಿ ರೂ.ಗಳಲ್ಲಿ ಕೋಟೆಪುರ-ಬೋಳಾರ ವರೆಗೆ ನೇತ್ರಾವತಿ ನದಿಗೆ ಪರ್ಯಾಯ ಸೇತುವೆ ನಿರ್ಮಾಣ ಹಾಗೂ ಸಜಿಪನಡು ವಿನಿಂದ ತುಂಬೆ ವರೆಗೆ 62 ಕೋಟಿ ರೂ.ಗಳಲ್ಲಿ ಸೇತುವೆ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ಮಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಸಮುದ್ರ ತೀರದಲ್ಲಿ ಕೇರಳ ವರೆಗೆ ಕಾರ್ನಿಶ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಮಾಂಕಾಳಿಪಡ್ಪುವಿನಲ್ಲಿ ರೈಲ್ವೆ ಕೆಳಸೇತುವೆ ಕಾಮಗಾರಿ ನಡೆಯುತ್ತಿದೆ. ಇದು ಮುಕ್ತಾಯಗೊಂಡರೆ ಪಂಪ್‌ವೆಲ್ ಮೂಲಕ ಹೋಗುವವರಿಗೆ ಹಾಗೂ ತೊಕ್ಕೊಟ್ಟಿನಿಂದ ಪಂಪ್‌ವೆಲ್ ಕಡೆಗೆ ಸಂಚರಿಸುವವರು ಸುಲಭದಲ್ಲಿ ಸಂಚರಿಸಲು ಸಾಧ್ಯವಾಗಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು