9:56 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಬಿ.ಸಿ.ರೋಡಿನಲ್ಲಿ ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ ಸಚಿವ ಮಹಾದೇವಪ್ಪ

21/01/2024, 19:49

ಬಂಟ್ವಾಳ(reporterkarnataka.com): ಸಂವಿಧಾನದ 75 ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26 ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.
ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾ. ಬಿ.ಸಿ. ರೋಡ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನ ಜಾಥಾ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.
ಶೋಷಿತರಿಗೆ, ಅವಕಾಶ ವಂಚಿತರಿಗೆ ಅಂಬೇಡ್ಕರ್ ಅವರು ಪ್ರೇರಣಾ ಶಕ್ತಿಯಾಗಿದ್ದಾರೆ. ವೈಚಾರಿಕ ಆಲೋಚನೆಗಳ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕು. ಭಾರತವು ಬಹುತ್ವದ ರಾಷ್ಟ್ರವಾಗಿದ್ದು, ವೈವಿಧ್ಯತೆಯಲ್ಲಿ ಏಕತೆ ಇರುವ ನೆಲವಾಗಿದೆ. ಸಂವಿಧಾನವನ್ನು ನಾವು ರಕ್ಷಿಸಿದರೆ, ನಮ್ಮನ್ನು ಸಂವಿಧಾನವು ರಕ್ಷಿಸಲಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಪ್ರಯತ್ನಗಳ ವಿರುದ್ಧ ನಾವು ಜಾಗೃತರಾಗಬೇಕಿದೆ. ಆದರೆ, ಇಂದು ಸಂವಿಧಾನವು ಅಪಾಯದತ್ತ ಸಾಗುತ್ತಿದೆ ಎಂದು ಸಚಿವರು ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ರಮಾ‌ನಾಥ ರೈ, ವಿನಯಕುಮಾರ್ ಸೊರಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲಿನಿ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು