11:45 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಪಾನ್ ಪ್ರಬಲ ಭೂಕಂಪ: 55ಕ್ಕೂ ಹೆಚ್ಚು ಸಾವು; 1 ಲಕ್ಷಕ್ಕೂ ಅಧಿಕ ಮಂದಿಯ ಸ್ಥಳಾಂತರ

03/01/2024, 11:13

ಟೊಕಿಯೊ(reporterkarnataka.com): ಜಪಾನ್​ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ 55ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 1 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.
ಜಪಾನ್ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಪ್ರಮುಖ ರಸ್ತೆಗಳು ಬಾಯಿ ಬಿಟ್ಟಿವೆ. ಆದರೆ ಅದೃಷ್ಟವಶಾತ್ ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆ.
100ಕ್ಕೂ ಅಧಿಕ ಬಾರಿ ಭೂಮಿ ಕಂಪಸಿರುವುದರಿಂದ ಜನರು ಭಯಭೀತರಾಗಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.
ವಾಜಿಮಾ ಬಂದರು ಪ್ರದೇಶದಲ್ಲಿ ಆರಂಭದಲ್ಲೇ 13 ಜನರು ಸಾವನ್ನಪ್ಪಿದ್ದರು. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು