8:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜಪಾನ್ ಪ್ರಬಲ ಭೂಕಂಪ: 55ಕ್ಕೂ ಹೆಚ್ಚು ಸಾವು; 1 ಲಕ್ಷಕ್ಕೂ ಅಧಿಕ ಮಂದಿಯ ಸ್ಥಳಾಂತರ

03/01/2024, 11:13

ಟೊಕಿಯೊ(reporterkarnataka.com): ಜಪಾನ್​ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ 55ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 1 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.
ಜಪಾನ್ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಪ್ರಮುಖ ರಸ್ತೆಗಳು ಬಾಯಿ ಬಿಟ್ಟಿವೆ. ಆದರೆ ಅದೃಷ್ಟವಶಾತ್ ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆ.
100ಕ್ಕೂ ಅಧಿಕ ಬಾರಿ ಭೂಮಿ ಕಂಪಸಿರುವುದರಿಂದ ಜನರು ಭಯಭೀತರಾಗಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.
ವಾಜಿಮಾ ಬಂದರು ಪ್ರದೇಶದಲ್ಲಿ ಆರಂಭದಲ್ಲೇ 13 ಜನರು ಸಾವನ್ನಪ್ಪಿದ್ದರು. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು