3:25 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಜಪಾನಿನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲು; ಸುನಾಮಿ ಎಚ್ಚರಿಕೆ

02/01/2024, 11:35

ಟೊಕಿಯೊ(reporter Karnataka.com): ಜಪಾನ್​ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ನಾಶವಾಗಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದೆ.
ಭೂಕಂಪದಿಂದ ಈಗಲಾಗಲೇ ಡಜನಿಗೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.


ವಾಜಿಮಾ ಬಂದರು ಪ್ರದೇಶದಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು. ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು