3:04 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರspJFVbfeQEVLsQBKtEdpRjhXKGAZCILdzNhYjvZCaEMZQNFguKXUgsruFnkBgdTJepmjRAIYnJypXkOjWMeOVIGQRpwSNpmEQOBiXTfYqIsjgeNOUJhMamgIoVWiNwemdsWMCXnlJIjLayZtlrzEwORjzBwMxTEAPdRvczpFwbHwruaOhymCuwZakigxmvGhRzXuJtbiwASaxtjJeYzUlcYJPkhyUBPlfbWzuEFsaklLZChdbBjaKcFMvSPLQiJnMfUkbnjfVImapYJIsWuVhMycQfphjsaWqJjJwZKUODiGEAbIXohuUZZTFjnryxGfDulJAEWyjmBCdHVRFncMmbqIcOJMQXQbjDnWYPfhzmAIKPwCbFqfgSsAJiCGOoqhIXJxVGpFHlWVLBDK

29/08/2021, 22:02

ಮಂಗಳೂರು(reporterkarnataka.com):  ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು‌.

ಈ ಸಂದರ್ಭ ಮಾತನಾಡಿದ ಶಾಸಕರು, ಜಪ್ಪಿನಮೊಗರು ವಾರ್ಡಿನ ಕಾರ್ಪೋರೇಟರ್ ವೀಣಾ ಮಂಗಳ ಅವರ ಮುಂದಾಳತ್ವದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ತಂಡವು ಮನೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದರು. 

ಮಳೆಯಿಂದ ಮನೆಯು ಕುಸಿದಿದ್ದ‌ ಸಂದರ್ಭದಲ್ಲಿ ಮಳೆ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗಿತ್ತು. ಹೆಚ್ಚುವರಿ ಹಣವನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಗೆಳೆಯರ ಬಳಗದ ಸದಸ್ಯರು ಹೊಂದಿಸಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಳ ಮಾತನಾಡಿ, ಮನೆಯು ಕುಸಿದಿದ್ದ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಳೆ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆಗೊಳಿಸಿದ್ದರು. ಹೆಚ್ಚುವರಿ ಹಣವನ್ನು ನಮ್ಮ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರು ಒದಗಿಸಿದ್ದಾರೆ. ಎಲ್ಲರಿಗೂ ಕೂಡ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು

ಈ ಸಂದರ್ಭದಲ್ಲಿ ಆರೋಗ್ಯ ಸಮಿತಿ ಅಧ್ಯಕ್ಷ

ಸಂದೀಪ್ ಗರೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ

ಸಂದೇಶ್ ಶೆಟ್ಟಿ ರಾಮ್ ಪ್ರಸಾದ್ ಶೆಟ್ಟಿ, ಗಣೇಶ್ ಎಂಪಿ, ಸುಜಾತ ,ಗೆಳೆಯರ ಬಳಗದ ಅಧ್ಯಕ್ಷ

 ದೀಪಕ್ , ಪುಷ್ಪರಾಜ್ ಅಮೀನ್ ರಾಜೇಶ ಸಪಲ್ಯ ಗೆಳೆಯರ ಬಳಗದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು