4:10 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರspJFVbfeQEVLsQBKtEdpRjhXKGAZCILdzNhYjvZCaEMZQNFguKXUgsruFnkBgdTJepmjRAIYnJypXkOjWMeOVIGQRpwSNpmEQOBiXTfYqIsjgeNOUJhMamgIoVWiNwemdsWMCXnlJIjLayZtlrzEwORjzBwMxTEAPdRvczpFwbHwruaOhymCuwZakigxmvGhRzXuJtbiwASaxtjJeYzUlcYJPkhyUBPlfbWzuEFsaklLZChdbBjaKcFMvSPLQiJnMfUkbnjfVImapYJIsWuVhMycQfphjsaWqJjJwZKUODiGEAbIXohuUZZTFjnryxGfDulJAEWyjmBCdHVRFncMmbqIcOJMQXQbjDnWYPfhzmAIKPwCbFqfgSsAJiCGOoqhIXJxVGpFHlWVLBDK

29/08/2021, 22:02

ಮಂಗಳೂರು(reporterkarnataka.com):  ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು‌.

ಈ ಸಂದರ್ಭ ಮಾತನಾಡಿದ ಶಾಸಕರು, ಜಪ್ಪಿನಮೊಗರು ವಾರ್ಡಿನ ಕಾರ್ಪೋರೇಟರ್ ವೀಣಾ ಮಂಗಳ ಅವರ ಮುಂದಾಳತ್ವದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ತಂಡವು ಮನೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದರು. 

ಮಳೆಯಿಂದ ಮನೆಯು ಕುಸಿದಿದ್ದ‌ ಸಂದರ್ಭದಲ್ಲಿ ಮಳೆ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗಿತ್ತು. ಹೆಚ್ಚುವರಿ ಹಣವನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಗೆಳೆಯರ ಬಳಗದ ಸದಸ್ಯರು ಹೊಂದಿಸಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಳ ಮಾತನಾಡಿ, ಮನೆಯು ಕುಸಿದಿದ್ದ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಳೆ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆಗೊಳಿಸಿದ್ದರು. ಹೆಚ್ಚುವರಿ ಹಣವನ್ನು ನಮ್ಮ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರು ಒದಗಿಸಿದ್ದಾರೆ. ಎಲ್ಲರಿಗೂ ಕೂಡ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು

ಈ ಸಂದರ್ಭದಲ್ಲಿ ಆರೋಗ್ಯ ಸಮಿತಿ ಅಧ್ಯಕ್ಷ

ಸಂದೀಪ್ ಗರೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ

ಸಂದೇಶ್ ಶೆಟ್ಟಿ ರಾಮ್ ಪ್ರಸಾದ್ ಶೆಟ್ಟಿ, ಗಣೇಶ್ ಎಂಪಿ, ಸುಜಾತ ,ಗೆಳೆಯರ ಬಳಗದ ಅಧ್ಯಕ್ಷ

 ದೀಪಕ್ , ಪುಷ್ಪರಾಜ್ ಅಮೀನ್ ರಾಜೇಶ ಸಪಲ್ಯ ಗೆಳೆಯರ ಬಳಗದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು