8:11 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರspJFVbfeQEVLsQBKtEdpRjhXKGAZCILdzNhYjvZCaEMZQNFguKXUgsruFnkBgdTJepmjRAIYnJypXkOjWMeOVIGQRpwSNpmEQOBiXTfYqIsjgeNOUJhMamgIoVWiNwemdsWMCXnlJIjLayZtlrzEwORjzBwMxTEAPdRvczpFwbHwruaOhymCuwZakigxmvGhRzXuJtbiwASaxtjJeYzUlcYJPkhyUBPlfbWzuEFsaklLZChdbBjaKcFMvSPLQiJnMfUkbnjfVImapYJIsWuVhMycQfphjsaWqJjJwZKUODiGEAbIXohuUZZTFjnryxGfDulJAEWyjmBCdHVRFncMmbqIcOJMQXQbjDnWYPfhzmAIKPwCbFqfgSsAJiCGOoqhIXJxVGpFHlWVLBDK

29/08/2021, 22:02

ಮಂಗಳೂರು(reporterkarnataka.com):  ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು‌.

ಈ ಸಂದರ್ಭ ಮಾತನಾಡಿದ ಶಾಸಕರು, ಜಪ್ಪಿನಮೊಗರು ವಾರ್ಡಿನ ಕಾರ್ಪೋರೇಟರ್ ವೀಣಾ ಮಂಗಳ ಅವರ ಮುಂದಾಳತ್ವದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ತಂಡವು ಮನೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದರು. 

ಮಳೆಯಿಂದ ಮನೆಯು ಕುಸಿದಿದ್ದ‌ ಸಂದರ್ಭದಲ್ಲಿ ಮಳೆ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗಿತ್ತು. ಹೆಚ್ಚುವರಿ ಹಣವನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಗೆಳೆಯರ ಬಳಗದ ಸದಸ್ಯರು ಹೊಂದಿಸಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಳ ಮಾತನಾಡಿ, ಮನೆಯು ಕುಸಿದಿದ್ದ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಳೆ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆಗೊಳಿಸಿದ್ದರು. ಹೆಚ್ಚುವರಿ ಹಣವನ್ನು ನಮ್ಮ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರು ಒದಗಿಸಿದ್ದಾರೆ. ಎಲ್ಲರಿಗೂ ಕೂಡ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು

ಈ ಸಂದರ್ಭದಲ್ಲಿ ಆರೋಗ್ಯ ಸಮಿತಿ ಅಧ್ಯಕ್ಷ

ಸಂದೀಪ್ ಗರೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ

ಸಂದೇಶ್ ಶೆಟ್ಟಿ ರಾಮ್ ಪ್ರಸಾದ್ ಶೆಟ್ಟಿ, ಗಣೇಶ್ ಎಂಪಿ, ಸುಜಾತ ,ಗೆಳೆಯರ ಬಳಗದ ಅಧ್ಯಕ್ಷ

 ದೀಪಕ್ , ಪುಷ್ಪರಾಜ್ ಅಮೀನ್ ರಾಜೇಶ ಸಪಲ್ಯ ಗೆಳೆಯರ ಬಳಗದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು