10:05 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರ

29/08/2021, 20:26

ಮಂಗಳೂರು(reporterkarnataka.com):  ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು‌.

ಈ ಸಂದರ್ಭ ಮಾತನಾಡಿದ ಶಾಸಕರು, ಜಪ್ಪಿನಮೊಗರು ವಾರ್ಡಿನ ಕಾರ್ಪೋರೇಟರ್ ವೀಣಾ ಮಂಗಳ ಅವರ ಮುಂದಾಳತ್ವದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ತಂಡವು ಮನೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದರು. 

ಮಳೆಯಿಂದ ಮನೆಯು ಕುಸಿದಿದ್ದ‌ ಸಂದರ್ಭದಲ್ಲಿ ಮಳೆ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗಿತ್ತು. ಹೆಚ್ಚುವರಿ ಹಣವನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಗೆಳೆಯರ ಬಳಗದ ಸದಸ್ಯರು ಹೊಂದಿಸಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಳ ಮಾತನಾಡಿ, ಮನೆಯು ಕುಸಿದಿದ್ದ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಳೆ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆಗೊಳಿಸಿದ್ದರು. ಹೆಚ್ಚುವರಿ ಹಣವನ್ನು ನಮ್ಮ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರು ಒದಗಿಸಿದ್ದಾರೆ. ಎಲ್ಲರಿಗೂ ಕೂಡ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು

ಈ ಸಂದರ್ಭದಲ್ಲಿ ಆರೋಗ್ಯ ಸಮಿತಿ ಅಧ್ಯಕ್ಷ ಸಂದೀಪ್ ಗರೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ ಸಂದೇಶ್ ಶೆಟ್ಟಿ ರಾಮ್ ಪ್ರಸಾದ್ ಶೆಟ್ಟಿ, ಗಣೇಶ್ ಎಂಪಿ, ಸುಜಾತ ,ಗೆಳೆಯರ ಬಳಗದ ಅಧ್ಯಕ್ಷ ದೀಪಕ್ , ಪುಷ್ಪರಾಜ್ ಅಮೀನ್ ರಾಜೇಶ ಸಪಲ್ಯ ಗೆಳೆಯರ ಬಳಗದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು