7:46 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರ

29/08/2021, 20:26

ಮಂಗಳೂರು(reporterkarnataka.com):  ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು‌.

ಈ ಸಂದರ್ಭ ಮಾತನಾಡಿದ ಶಾಸಕರು, ಜಪ್ಪಿನಮೊಗರು ವಾರ್ಡಿನ ಕಾರ್ಪೋರೇಟರ್ ವೀಣಾ ಮಂಗಳ ಅವರ ಮುಂದಾಳತ್ವದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ತಂಡವು ಮನೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದರು. 

ಮಳೆಯಿಂದ ಮನೆಯು ಕುಸಿದಿದ್ದ‌ ಸಂದರ್ಭದಲ್ಲಿ ಮಳೆ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗಿತ್ತು. ಹೆಚ್ಚುವರಿ ಹಣವನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಗೆಳೆಯರ ಬಳಗದ ಸದಸ್ಯರು ಹೊಂದಿಸಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಳ ಮಾತನಾಡಿ, ಮನೆಯು ಕುಸಿದಿದ್ದ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಳೆ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆಗೊಳಿಸಿದ್ದರು. ಹೆಚ್ಚುವರಿ ಹಣವನ್ನು ನಮ್ಮ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರು ಒದಗಿಸಿದ್ದಾರೆ. ಎಲ್ಲರಿಗೂ ಕೂಡ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು

ಈ ಸಂದರ್ಭದಲ್ಲಿ ಆರೋಗ್ಯ ಸಮಿತಿ ಅಧ್ಯಕ್ಷ ಸಂದೀಪ್ ಗರೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ ಸಂದೇಶ್ ಶೆಟ್ಟಿ ರಾಮ್ ಪ್ರಸಾದ್ ಶೆಟ್ಟಿ, ಗಣೇಶ್ ಎಂಪಿ, ಸುಜಾತ ,ಗೆಳೆಯರ ಬಳಗದ ಅಧ್ಯಕ್ಷ ದೀಪಕ್ , ಪುಷ್ಪರಾಜ್ ಅಮೀನ್ ರಾಜೇಶ ಸಪಲ್ಯ ಗೆಳೆಯರ ಬಳಗದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು