7:20 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಜಮ್ಮು- ಕಾಶ್ಮೀರ ಶಾಂತಿಯುತ ಚುನಾವಣೆ ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿ ಹೆಚ್ಚಿಸಿದೆ: ಮೋಹನ್ ಭಾಗವತ್

12/10/2024, 18:04

ನಾಗಪುರ(reporterkarnataka.com): ಜಮ್ಮು- ಕಾಶ್ಮೀರದಲ್ಲಿ ಶಾಂತಿಯುತವಾಗಿ ಚುನಾವಣೆ ಪೂರ್ಣಗೊಂಡಿದ್ದು, ಇದು ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿಯನ್ನು ಹೆಚ್ಚಿಸಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು.
ಅವರು ನಾಗ್ಪುರದ ಆರೆಸ್ಸೆಸ್ ಪ್ರಧಾನ ಕಚೇರಿಯಲ್ಲಿ ವಿಜಯ ದಶಮಿ ಆಚರಣೆಯನ್ನು ಉದ್ದೇಶಿಸಿ ಮಾತನಾಡಿದರು.
ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ
ವೈದ್ಯೆಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು
ನಾಚಿಕೆಗೇಡಿನ ಸಂಗತಿ.
ಆದರೆ ಇದು ಒಂದೇ ಒಂದು ಘಟನೆಯಲ್ಲ.. ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಭಾರತ ವಿರೋಧಿ ಪ್ರಚಾರ ಬಾಂಗ್ಲಾದೇಶದಲ್ಲಿ ನಡೆಯುತ್ತಿಧ. ಬಾಂಗ್ಲಾವು ಪಾಕಿಸ್ತಾನದೊಂದಿಗೆ ತನ್ನನ್ನು ಹೊಂದಿಸಿಕೊಳ್ಳಲು ಕಾರಣವಾಗುತ್ತದೆ. ನೆರೆಯ ದೇಶದಲ್ಲಿ ನಡೆಯುತ್ತಿರುವ ಹಿಂದೂ ವಿರೋಧಿ ಹಿಂಸಾಚಾರ ಕಳವಳಕಾರಿ ಎಂದರು.
ಬಾಂಗ್ಲಾ ದೇಶದಲ್ಲಿ, ಭಾರತದಿಂದ ನಮಗೆ ಬೆದರಿಕೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಯಾವತ್ತೂ ಭಾರತ ಈ ಕೆಲಸ ಮಾಡಿಲ್ಲ. ಇದು ಅಲ್ಲಿನ ಕೆಲ ಮೂಲಭೂತವಾದಿಗಳು ಸೃಷ್ಟಿಸಿರುವುದಾಗಿದೆ. ಇದರ ಬಗ್ಗೆ ಎಲ್ಲರೂ ಜಾಗೃತರಾಗಬೇಕಿದೆ ಎಂದು ನುಡಿದರು.
ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಅದು ಎಷ್ಟು ವ್ಯಾಪಕವಾಗಬಹುದು ಮತ್ತು ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಜಾಗತಿಕ ಬಿಕ್ಕಟ್ಟುಗಳು ಏನನ್ನು ಉಂಟುಮಾಡಬಹುದು ಎಂಬುದರ ಕುರಿತು ಕಳವಳವನ್ನು ಉಂಟುಮಾಡುತ್ತದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು