4:11 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಜಮ್ಮು- ಕಾಶ್ಮೀರ ಶಾಂತಿಯುತ ಚುನಾವಣೆ ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿ ಹೆಚ್ಚಿಸಿದೆ: ಮೋಹನ್ ಭಾಗವತ್

12/10/2024, 18:04

ನಾಗಪುರ(reporterkarnataka.com): ಜಮ್ಮು- ಕಾಶ್ಮೀರದಲ್ಲಿ ಶಾಂತಿಯುತವಾಗಿ ಚುನಾವಣೆ ಪೂರ್ಣಗೊಂಡಿದ್ದು, ಇದು ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿಯನ್ನು ಹೆಚ್ಚಿಸಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು.
ಅವರು ನಾಗ್ಪುರದ ಆರೆಸ್ಸೆಸ್ ಪ್ರಧಾನ ಕಚೇರಿಯಲ್ಲಿ ವಿಜಯ ದಶಮಿ ಆಚರಣೆಯನ್ನು ಉದ್ದೇಶಿಸಿ ಮಾತನಾಡಿದರು.
ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ
ವೈದ್ಯೆಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು
ನಾಚಿಕೆಗೇಡಿನ ಸಂಗತಿ.
ಆದರೆ ಇದು ಒಂದೇ ಒಂದು ಘಟನೆಯಲ್ಲ.. ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಭಾರತ ವಿರೋಧಿ ಪ್ರಚಾರ ಬಾಂಗ್ಲಾದೇಶದಲ್ಲಿ ನಡೆಯುತ್ತಿಧ. ಬಾಂಗ್ಲಾವು ಪಾಕಿಸ್ತಾನದೊಂದಿಗೆ ತನ್ನನ್ನು ಹೊಂದಿಸಿಕೊಳ್ಳಲು ಕಾರಣವಾಗುತ್ತದೆ. ನೆರೆಯ ದೇಶದಲ್ಲಿ ನಡೆಯುತ್ತಿರುವ ಹಿಂದೂ ವಿರೋಧಿ ಹಿಂಸಾಚಾರ ಕಳವಳಕಾರಿ ಎಂದರು.
ಬಾಂಗ್ಲಾ ದೇಶದಲ್ಲಿ, ಭಾರತದಿಂದ ನಮಗೆ ಬೆದರಿಕೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಯಾವತ್ತೂ ಭಾರತ ಈ ಕೆಲಸ ಮಾಡಿಲ್ಲ. ಇದು ಅಲ್ಲಿನ ಕೆಲ ಮೂಲಭೂತವಾದಿಗಳು ಸೃಷ್ಟಿಸಿರುವುದಾಗಿದೆ. ಇದರ ಬಗ್ಗೆ ಎಲ್ಲರೂ ಜಾಗೃತರಾಗಬೇಕಿದೆ ಎಂದು ನುಡಿದರು.
ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಅದು ಎಷ್ಟು ವ್ಯಾಪಕವಾಗಬಹುದು ಮತ್ತು ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಜಾಗತಿಕ ಬಿಕ್ಕಟ್ಟುಗಳು ಏನನ್ನು ಉಂಟುಮಾಡಬಹುದು ಎಂಬುದರ ಕುರಿತು ಕಳವಳವನ್ನು ಉಂಟುಮಾಡುತ್ತದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು