6:40 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಖೇದ

28/01/2025, 19:15

ಬೆಂಗಳೂರು(reporterkarnataka.com): ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದರು.
ಅವರು ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ 3℅ ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು DCRE ಸೆಲ್ ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಲು ಸಿಎಂ ಸೂಚಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ, ಕೌಂಟರ್ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಅಸಮಾಧಾನದಿಂದ ಸಭೆಯಲ್ಲಿ ಪ್ರಶ್ನಿಸಿದರು. 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು. ಬಳಿಕ ಈ ಬಗ್ಗೆ ತಾವು ತೀವ್ರವಾಗಿ ಗಮನಿಸಿ ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವ ದಿಕ್ಕಿನಲ್ಲಿ ಗಮನ ಹರಿಸುವುದಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು