12:39 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು