4:06 PM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು