12:50 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು