10:37 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು