3:30 AM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು