12:21 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು